<p><strong>ಬೆಂಗಳೂರು: </strong>ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿರುವ 652 ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲಾಗುವುದು ಎಂದು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ವಿಧಾನಸಭೆಯಲ್ಲಿ ಸೋಮವಾರ ತಿಳಿಸಿದರು.<br /> <br /> ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಕೆ.ಶಿವಮೂರ್ತಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈಗಿರುವ ನಿಯಮಗಳ ಪ್ರಕಾರ 100 ಮನೆಗಳು ಹಾಗೂ 500ಕ್ಕಿಂತ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಕಂದಾಯ ಗ್ರಾಮಗಳು ಎಂದು ಗುರುತಿಸಲಾಗುತ್ತದೆ. ಈ ಪ್ರಮಾಣದಲ್ಲಿ ಮನೆಗಳು, ಜನಸಂಖ್ಯೆ ಇಲ್ಲದ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದರು.<br /> <br /> ಹಿಂದೆ 893 ತಾಂಡಾಗಳು ಇದ್ದವು. ಈಗಾಗಲೇ 241 ತಾಂಡಾಗಳು ಪರಿವರ್ತನೆ ಆಗಿವೆ. ಕಾಯ್ದೆಗೆ ತಿದ್ದುಪಡಿ ಆದರೆ ಉಳಿದ ತಾಂಡಾಗಳನ್ನು ಪರಿವರ್ತಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಶಿವಮೂರ್ತಿ, `ರಾಜ್ಯದಲ್ಲಿ 27 ಸಾವಿರ ಕುಗ್ರಾಮಗಳಿವೆ. ಗ್ರಾಮದ ಸ್ಥಾನಮಾನ ಇಲ್ಲದ ಕಾರಣ ಅಲ್ಲಿನ ಜನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿರುವ 652 ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲಾಗುವುದು ಎಂದು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ವಿಧಾನಸಭೆಯಲ್ಲಿ ಸೋಮವಾರ ತಿಳಿಸಿದರು.<br /> <br /> ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಕೆ.ಶಿವಮೂರ್ತಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈಗಿರುವ ನಿಯಮಗಳ ಪ್ರಕಾರ 100 ಮನೆಗಳು ಹಾಗೂ 500ಕ್ಕಿಂತ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಕಂದಾಯ ಗ್ರಾಮಗಳು ಎಂದು ಗುರುತಿಸಲಾಗುತ್ತದೆ. ಈ ಪ್ರಮಾಣದಲ್ಲಿ ಮನೆಗಳು, ಜನಸಂಖ್ಯೆ ಇಲ್ಲದ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದರು.<br /> <br /> ಹಿಂದೆ 893 ತಾಂಡಾಗಳು ಇದ್ದವು. ಈಗಾಗಲೇ 241 ತಾಂಡಾಗಳು ಪರಿವರ್ತನೆ ಆಗಿವೆ. ಕಾಯ್ದೆಗೆ ತಿದ್ದುಪಡಿ ಆದರೆ ಉಳಿದ ತಾಂಡಾಗಳನ್ನು ಪರಿವರ್ತಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಶಿವಮೂರ್ತಿ, `ರಾಜ್ಯದಲ್ಲಿ 27 ಸಾವಿರ ಕುಗ್ರಾಮಗಳಿವೆ. ಗ್ರಾಮದ ಸ್ಥಾನಮಾನ ಇಲ್ಲದ ಕಾರಣ ಅಲ್ಲಿನ ಜನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>