ತುಮಕೂರು: ಪಿಡಬ್ಯುಡಿ ಎಇಇ ಜಗದೀಶ್ ಮನೆ ಮೇಲೆ ಎಸಿಬಿ ಡಿವೈಎಸ್ಪಿ ಜಿ.ಎನ್.ಮೋಹನ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಜಿಲ್ಲೆ ಕೊರಟಗೆರೆಯಲ್ಲಿ ನಾಲ್ಕೂವರೆ ವರ್ಷದಿಂದ ಜಗದೀಶ್ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಎರಡು ವರ್ಷಗಳ ಹಿಂದೆ ಲೋಕಾಯುಕ್ತ ಪೋಲಿಸರು ಮಾಹಿತಿ ಕಲೆಹಾಕಿದ್ದರು. ಇದೀಗ ಎಸಿಬಿ ದಾಳಿ ನಡೆದಿದೆ.
ತುಮಕೂರು ನಗರದ ಸರಸ್ವತಿಪುರಂನಲ್ಲಿರುವ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.
ಎಸಿಎಫ್ ಪಾಂಡುರಂಗ ಪೈ ಮನೆ ಮೇಲೆ ಎಸಿಬಿ ದಾಳಿ
ಧಾರವಾಡ: ಅಂಕೋಲಾ ಎಸಿಎಫ್ ಪಾಂಡುರಂಗ ಪೈ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ.
(ಎಸಿಎಫ್ ಪಾಂಡುರಂಗ ಪೈ)
ಹುಬ್ಬಳ್ಳಿ, ಧಾರವಾಡ ಹಾಗೂ ಅಂಕೋಲಾದಲ್ಲಿನ ಮನೆಗಳ ಮೇಲೆ ಬುಧವಾರ ದಾಳಿ ನಡೆಸಲಾಗಿದೆ.
ಧಾರವಾಡದ ಸಿಲ್ವರ್ ಆರ್ಡಿಕ್ಸ್ ಬಡಾವಣೆಯಲ್ಲಿನ ಮನೆ.
ಲೋಕೋಪಯೋಗಿ ಇಲಾಖೆ ಎಇಇ ಮನೆಯಲ್ಲಿ ದಾಖಲೆ ಪರಿಶೀಲನೆ
ಬೆಳಗಾವಿ: ಲೋಕೋಪಯೋಗಿ ಇಲಾಖೆ ಎಇಇ ಸುರೇಶ ಭೀಮಾನಾಯಕ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಜಿಲ್ಲೆಯ ಕಿತ್ತೂರಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಎಸಿಬಿ ಡಿವೈಎಸ್ಪಿ ರಘು ನೇತೃತ್ವದಲ್ಲಿ ದಾಳಿ ನಡೆದಿದೆ.