<p><strong>ಬೆಂಗಳೂರು</strong>: ನಗರದಲ್ಲಿ ಉತ್ಪಾದನೆಯಾಗುವ ಬೃಹತ್ ಪ್ರಮಾಣದ ತ್ಯಾಜ್ಯವನ್ನು ಕಾರ್ಖಾನೆಗಳಲ್ಲಿ ಮರುಬಳಕೆ ಮಾಡಲು ಉತ್ತೇಜನ ನೀಡುವ ಬಗ್ಗೆ ಮಂಗಳವಾರ ನಡೆದ ತ್ಯಾಜ್ಯ ನಿರ್ವಹಣೆಯ ತಜ್ಞರ ಸಮಿತಿಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.<br /> <br /> ನಗರದಲ್ಲಿ ಪ್ರತಿನಿತ್ಯ ಸುಮಾರು 500 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಜತೆಗೆ ಮರುಬಳಕೆ ಮಾಡಬಹುದಾದ ತ್ಯಾಜ್ಯವೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಮರುಬಳಕೆ ಮಾಡಬಹುದಾದ ವಸ್ತುಗಳು ವ್ಯರ್ಥವಾಗಿ ತ್ಯಾಜ್ಯದ ರೂಪ ಪಡೆದು ಸಮಸ್ಯೆಯಾಗದಂತೆ ತಡೆಯಲು ಸಮಿತಿಯ ಈ ನಿರ್ಣಯ ಸಹಕಾರಿಯಾಗಲಿದೆ.<br /> <br /> ಪ್ಲಾಸ್ಟಿಕ್ನ ಕೈ ಚೀಲ, ಬಾಟಲ್ಗಳು, ಲೋಹದ ತುಂಡುಗಳು, ರಬ್ಬರ್ ವಸ್ತುಗಳನ್ನು ಮರುಬಳಕೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆಯನ್ನು ತಗ್ಗಿಸಲು ಎಲ್ಲ ರೀತಿಯಿಂದಲೂ ಪ್ರಯತ್ನಿಸಬೇಕು ಎಂದು ಸಮಿತಿ ಹೇಳಿದೆ.<br /> <br /> ಸಮಿತಿಯ ಈ ನಿರ್ಣಯವನ್ನು ಅಂಗೀಕರಿಸುವ ಬಗ್ಗೆ ಒಲವು ತೋರಿರುವ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ನಗರದ ವಿವಿಧ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ತ್ಯಾಜ್ಯದ ಸಮಸ್ಯೆಯನ್ನು ತಗ್ಗಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಉತ್ಪಾದನೆಯಾಗುವ ಬೃಹತ್ ಪ್ರಮಾಣದ ತ್ಯಾಜ್ಯವನ್ನು ಕಾರ್ಖಾನೆಗಳಲ್ಲಿ ಮರುಬಳಕೆ ಮಾಡಲು ಉತ್ತೇಜನ ನೀಡುವ ಬಗ್ಗೆ ಮಂಗಳವಾರ ನಡೆದ ತ್ಯಾಜ್ಯ ನಿರ್ವಹಣೆಯ ತಜ್ಞರ ಸಮಿತಿಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.<br /> <br /> ನಗರದಲ್ಲಿ ಪ್ರತಿನಿತ್ಯ ಸುಮಾರು 500 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಜತೆಗೆ ಮರುಬಳಕೆ ಮಾಡಬಹುದಾದ ತ್ಯಾಜ್ಯವೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಮರುಬಳಕೆ ಮಾಡಬಹುದಾದ ವಸ್ತುಗಳು ವ್ಯರ್ಥವಾಗಿ ತ್ಯಾಜ್ಯದ ರೂಪ ಪಡೆದು ಸಮಸ್ಯೆಯಾಗದಂತೆ ತಡೆಯಲು ಸಮಿತಿಯ ಈ ನಿರ್ಣಯ ಸಹಕಾರಿಯಾಗಲಿದೆ.<br /> <br /> ಪ್ಲಾಸ್ಟಿಕ್ನ ಕೈ ಚೀಲ, ಬಾಟಲ್ಗಳು, ಲೋಹದ ತುಂಡುಗಳು, ರಬ್ಬರ್ ವಸ್ತುಗಳನ್ನು ಮರುಬಳಕೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆಯನ್ನು ತಗ್ಗಿಸಲು ಎಲ್ಲ ರೀತಿಯಿಂದಲೂ ಪ್ರಯತ್ನಿಸಬೇಕು ಎಂದು ಸಮಿತಿ ಹೇಳಿದೆ.<br /> <br /> ಸಮಿತಿಯ ಈ ನಿರ್ಣಯವನ್ನು ಅಂಗೀಕರಿಸುವ ಬಗ್ಗೆ ಒಲವು ತೋರಿರುವ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ನಗರದ ವಿವಿಧ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ತ್ಯಾಜ್ಯದ ಸಮಸ್ಯೆಯನ್ನು ತಗ್ಗಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>