<p><strong>ಬೆಂಗಳೂರು:</strong> ಮಂಗಳೂರಿನ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ `ದಂಡುಪಾಳ್ಯ ಗ್ಯಾಂಗ್~ನ ಐದು ಮಂದಿಗೆ ನಗರದ 34ನೇ ವಿಶೇಷ ಸೆಷನ್ಸ್ ನ್ಯಾಯಾಲಯವು ಬುಧವಾರ ಮರಣದಂಡನೆ ವಿಧಿಸಿದೆ.<br /> <br /> ದಂಡುಪಾಳ್ಯ ಕೃಷ್ಣ, ದೊಡ್ಡಹನುಮ, ವೆಂಕಟೇಶ ಅಲಿಯಾಸ್ ಚಂದ್ರ, ಮುನಿಕೃಷ್ಣ ಮತ್ತು ನಲ್ಲತಿಮ್ಮ ಶಿಕ್ಷೆಗೆ ಗುರಿಯಾದವರು.<br /> <br /> 1997ರ ಅಕ್ಟೋಬರ್ 12ರಂದು ಈ ಐದು ಮಂದಿ, ವೃದ್ಧೆ ಲೂಯಿಸ್ ಡಿ ಮೆಲ್ಲೊ (80) ಮತ್ತು ಅವರ ಮನೆಗೆಲಸದವನಾದ ರಂಜಿತ್ ವೇಗನ್ (19) ಎಂಬ ಯುವಕನ ಕತ್ತು ಸೀಳಿ ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ಸೇರಿದಂತೆ ಐದು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.<br /> <br /> ಬೆಂಗಳೂರಿನ ವಿಜಯನಗರ ಠಾಣೆಯಲ್ಲಿ ಹಿಂದೆ ಇನ್ಸ್ಪೆಕ್ಟರ್ ಆಗಿದ್ದ ಎನ್.ಚಲಪತಿ ಮತ್ತು ಸಿಬ್ಬಂದಿ ಈ ಐದು ಮಂದಿಯನ್ನು 2001ರಲ್ಲಿ ಬಂಧಿಸಿದ್ದಾಗ ಜೋಡಿ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಅಪರಾಧಿಗಳು ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ದರೋಡೆ, ಕೊಲೆಗೆ ಸಂಬಂಧಿಸಿದ 16 ಪ್ರಕರಣಗಳಲ್ಲಿ ಅಪರಾಧಿಗಳಿಗೆ ಈಗಾಗಲೇ ಶಿಕ್ಷೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಗಳೂರಿನ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ `ದಂಡುಪಾಳ್ಯ ಗ್ಯಾಂಗ್~ನ ಐದು ಮಂದಿಗೆ ನಗರದ 34ನೇ ವಿಶೇಷ ಸೆಷನ್ಸ್ ನ್ಯಾಯಾಲಯವು ಬುಧವಾರ ಮರಣದಂಡನೆ ವಿಧಿಸಿದೆ.<br /> <br /> ದಂಡುಪಾಳ್ಯ ಕೃಷ್ಣ, ದೊಡ್ಡಹನುಮ, ವೆಂಕಟೇಶ ಅಲಿಯಾಸ್ ಚಂದ್ರ, ಮುನಿಕೃಷ್ಣ ಮತ್ತು ನಲ್ಲತಿಮ್ಮ ಶಿಕ್ಷೆಗೆ ಗುರಿಯಾದವರು.<br /> <br /> 1997ರ ಅಕ್ಟೋಬರ್ 12ರಂದು ಈ ಐದು ಮಂದಿ, ವೃದ್ಧೆ ಲೂಯಿಸ್ ಡಿ ಮೆಲ್ಲೊ (80) ಮತ್ತು ಅವರ ಮನೆಗೆಲಸದವನಾದ ರಂಜಿತ್ ವೇಗನ್ (19) ಎಂಬ ಯುವಕನ ಕತ್ತು ಸೀಳಿ ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ಸೇರಿದಂತೆ ಐದು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.<br /> <br /> ಬೆಂಗಳೂರಿನ ವಿಜಯನಗರ ಠಾಣೆಯಲ್ಲಿ ಹಿಂದೆ ಇನ್ಸ್ಪೆಕ್ಟರ್ ಆಗಿದ್ದ ಎನ್.ಚಲಪತಿ ಮತ್ತು ಸಿಬ್ಬಂದಿ ಈ ಐದು ಮಂದಿಯನ್ನು 2001ರಲ್ಲಿ ಬಂಧಿಸಿದ್ದಾಗ ಜೋಡಿ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಅಪರಾಧಿಗಳು ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ದರೋಡೆ, ಕೊಲೆಗೆ ಸಂಬಂಧಿಸಿದ 16 ಪ್ರಕರಣಗಳಲ್ಲಿ ಅಪರಾಧಿಗಳಿಗೆ ಈಗಾಗಲೇ ಶಿಕ್ಷೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>