<p><strong>ಮುಡಿಪು (ದಕ್ಷಿಣ ಕನ್ನಡ ಜಿಲ್ಲೆ):</strong> ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪ್ರವಾಸಕ್ಕೆ ಹೊರಟಿದ್ದ ತಂಡವನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಶನಿವಾರ ರಾತ್ರಿ ತಡೆದು ನಿಲ್ಲಿಸಿ ವಿದ್ಯಾರ್ಥಿಗಳನ್ನು ಹಾಗೂ ಸಂಘಟಕರನ್ನು ತರಾಟೆಗೆ ತೆಗೆದುಕೊಂಡು ಪ್ರವಾಸ ರದ್ದಾಗುವಂತೆ ಮಾಡಿದ್ದಾರೆ.<br /> <br /> ಬಳಿಕ ತಡರಾತ್ರಿ ಕೆಲವು ದುಷ್ಕರ್ಮಿಗಳು ಅಲ್ಲಿನ ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಿದ್ದರು. ಇದರಿಂದ ಪರಿಸರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಮುಡಿಪುವಿನಲ್ಲಿ ಅಂಗಡಿಗಳು ಮುಚ್ಚಿದ್ದವು.<br /> <br /> 14 ವಿದ್ಯಾರ್ಥಿನಿಯರು ಮತ್ತು 24 ವಿದ್ಯಾರ್ಥಿಗಳು ಬೆಂಗಳೂರು ಮತ್ತು ಮೈಸೂರಿಗೆ ಮೂರು ದಿನಗಳ ಶೈಕ್ಷಣಿಕ ಪ್ರವಾಸಕ್ಕೆಂದು ಹೊರಟಿದ್ದರು. ಇದಕ್ಕೆ ಖಾಸಗಿ ಬಸ್ ನಿಗದಿ ಪಡಿಸಲಾಗಿತ್ತು. ‘ವಿದ್ಯಾರ್ಥಿನಿಯರಲ್ಲಿ ಹೆಚ್ಚಿನವರು ಹಿಂದೂ ಸಮುದಾಯದವರು; ಆದರೆ ಹುಡುಗರಲ್ಲಿ ಅರ್ಧದಷ್ಟು ಮುಸ್ಲಿಂ ಸಮುದಾಯದವರು’ ಎಂಬ ನೆಪದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮುಡಿಪುವಿನಲ್ಲಿ ಸೇರಿದ್ದರು.<br /> <br /> ಕಾಲೇಜ್ ಆವರಣದಿಂದ ಬಸ್ ಹೊರಗೆ ಬರುತ್ತಿದ್ದಾಗ ಅದನ್ನು ತಡೆದು ಮುತ್ತಿಗೆ ಹಾಕಿದರು. ಗಾಜನ್ನು ಪುಡಿ ಮಾಡಿದರು. ವಿದ್ಯಾರ್ಥಿಗಳನ್ನು ಕೆಳಗಿಳಿಸಿದರು ಎನ್ನಲಾಗಿದೆ.<br /> <br /> <strong>ಮುಖ್ಯಾಂಶಗಳು<br /> * ವಿದ್ಯಾರ್ಥಿಗಳ 3 ದಿನಗಳ ಪ್ರವಾಸ ರದ್ದು<br /> * ಕಲ್ಲೆಸೆತ: ಐದು ಜನರ ಬಂಧನ</strong><br /> <br /> * * *<br /> <br /> ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನ ವೀಕ್ಷಿಸುವುದಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವಾಸ ಏರ್ಪಡಿಸಲಾಗಿತ್ತು. ಪ್ರವಾಸಕ್ಕೆ ಎಲ್ಲ ವಿದ್ಯಾರ್ಥಿಗಳ ಪೋಷಕರ ಅನುಮತಿ ಪತ್ರವನ್ನೂ ಪಡೆಯಲಾಗಿತ್ತು. ವಿವಾದದ ಬಳಿಕ ಪ್ರವಾಸ ರದ್ದುಗೊಳಿಸಲಾಗಿದೆ.<br /> <strong>–ನಂದಕಿಶೋರ್,<br /> ನೋಡಲ್ ಅಧಿಕಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು (ದಕ್ಷಿಣ ಕನ್ನಡ ಜಿಲ್ಲೆ):</strong> ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪ್ರವಾಸಕ್ಕೆ ಹೊರಟಿದ್ದ ತಂಡವನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಶನಿವಾರ ರಾತ್ರಿ ತಡೆದು ನಿಲ್ಲಿಸಿ ವಿದ್ಯಾರ್ಥಿಗಳನ್ನು ಹಾಗೂ ಸಂಘಟಕರನ್ನು ತರಾಟೆಗೆ ತೆಗೆದುಕೊಂಡು ಪ್ರವಾಸ ರದ್ದಾಗುವಂತೆ ಮಾಡಿದ್ದಾರೆ.<br /> <br /> ಬಳಿಕ ತಡರಾತ್ರಿ ಕೆಲವು ದುಷ್ಕರ್ಮಿಗಳು ಅಲ್ಲಿನ ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಿದ್ದರು. ಇದರಿಂದ ಪರಿಸರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಮುಡಿಪುವಿನಲ್ಲಿ ಅಂಗಡಿಗಳು ಮುಚ್ಚಿದ್ದವು.<br /> <br /> 14 ವಿದ್ಯಾರ್ಥಿನಿಯರು ಮತ್ತು 24 ವಿದ್ಯಾರ್ಥಿಗಳು ಬೆಂಗಳೂರು ಮತ್ತು ಮೈಸೂರಿಗೆ ಮೂರು ದಿನಗಳ ಶೈಕ್ಷಣಿಕ ಪ್ರವಾಸಕ್ಕೆಂದು ಹೊರಟಿದ್ದರು. ಇದಕ್ಕೆ ಖಾಸಗಿ ಬಸ್ ನಿಗದಿ ಪಡಿಸಲಾಗಿತ್ತು. ‘ವಿದ್ಯಾರ್ಥಿನಿಯರಲ್ಲಿ ಹೆಚ್ಚಿನವರು ಹಿಂದೂ ಸಮುದಾಯದವರು; ಆದರೆ ಹುಡುಗರಲ್ಲಿ ಅರ್ಧದಷ್ಟು ಮುಸ್ಲಿಂ ಸಮುದಾಯದವರು’ ಎಂಬ ನೆಪದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮುಡಿಪುವಿನಲ್ಲಿ ಸೇರಿದ್ದರು.<br /> <br /> ಕಾಲೇಜ್ ಆವರಣದಿಂದ ಬಸ್ ಹೊರಗೆ ಬರುತ್ತಿದ್ದಾಗ ಅದನ್ನು ತಡೆದು ಮುತ್ತಿಗೆ ಹಾಕಿದರು. ಗಾಜನ್ನು ಪುಡಿ ಮಾಡಿದರು. ವಿದ್ಯಾರ್ಥಿಗಳನ್ನು ಕೆಳಗಿಳಿಸಿದರು ಎನ್ನಲಾಗಿದೆ.<br /> <br /> <strong>ಮುಖ್ಯಾಂಶಗಳು<br /> * ವಿದ್ಯಾರ್ಥಿಗಳ 3 ದಿನಗಳ ಪ್ರವಾಸ ರದ್ದು<br /> * ಕಲ್ಲೆಸೆತ: ಐದು ಜನರ ಬಂಧನ</strong><br /> <br /> * * *<br /> <br /> ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನ ವೀಕ್ಷಿಸುವುದಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವಾಸ ಏರ್ಪಡಿಸಲಾಗಿತ್ತು. ಪ್ರವಾಸಕ್ಕೆ ಎಲ್ಲ ವಿದ್ಯಾರ್ಥಿಗಳ ಪೋಷಕರ ಅನುಮತಿ ಪತ್ರವನ್ನೂ ಪಡೆಯಲಾಗಿತ್ತು. ವಿವಾದದ ಬಳಿಕ ಪ್ರವಾಸ ರದ್ದುಗೊಳಿಸಲಾಗಿದೆ.<br /> <strong>–ನಂದಕಿಶೋರ್,<br /> ನೋಡಲ್ ಅಧಿಕಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>