‘ಕರ್ನಾಟಕವು ಯುರೋಪ್ ಖಂಡದ ಹಲವು ದೇಶಗಳಿಗಿಂತ ದೊಡ್ಡದು. ಭಾರತ ಅಭಿವೃದ್ಧಿಯಾಗಬೇಕೆಂದರೆ ಇಲ್ಲಿನ ರಾಜ್ಯಗಳು ಏಳಿಗೆಯಾಗಬೇಕು. ನಾವು ಪ್ರಗತಿ ಹೊಂದಲು ಅವಕಾಶ ನೀಡಬೇಕಾದ ಕಾಲಘಟ್ಟದಲ್ಲಿದ್ದೇವೆ. ಅವುಗಳ ಅನನ್ಯತೆಯ ಪ್ರತಿಪಾದನೆಯನ್ನು ಧಕ್ಕೆ ಎಂದು ಭಾವಿಸಿ, ರಾಜ್ಯಗಳ ಏಳಿಗೆಗೆ ಅಡ್ಡಿಯಾಗಬಾರದು’ ಎಂದು ಕಿವಿ ಮಾತು ಹೇಳಿದ್ದಾರೆ.
**
ಅಸ್ಮಿತೆಗಾಗಿ ಹೋರಾಡುವುದು ತಪ್ಪೇ?
‘ಕನ್ನಡಿಗರು ತಮ್ಮದೇ ನಾಡ ಧ್ವಜ ಹೊಂದುವುದು, ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡುವುದು ಮತ್ತು ನಮ್ಮ ನಾಡಿನ ಅಸ್ಮಿತೆಗಾಗಿ ಹೋರಾಡುವುದು ಸದೃಢ ರಾಷ್ಟ್ರ ನಿರ್ಮಾಣದ ಆಶಯಕ್ಕೆ ಹೇಗೆ ಅಡ್ಡಿ ಆಗುತ್ತದೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.