<p><strong>ಬೆಂಗಳೂರು: </strong>ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿದೆ.<br /> <br /> ಸೋಮವಾರ ಮಧ್ಯಾಹ್ನ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಎಚ್.ಅಮೃತ್ಕುಮಾರ್ ಅವರು ಆರೋಪಿ ದರ್ಶನ್ ಅವರಿಗೆ ಜಾಮೀನು ನೀಡದಂತೆ ಕೋರಿ ಆಕ್ಷೇಪಣಾ ಅರ್ಜಿ ಸಲ್ಲಿಸಿದರು.<br /> <br /> ನಂತರ ವಾದ ಮಂಡಿಸಿದ ಅಮೃತ್ಕುಮಾರ್ ಅವರು, `ಆರೋಪಿ ವಿರುದ್ಧ ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯ್ದೆಯಂತಹ ಗಂಭೀರ ಸ್ವರೂಪದ ಪ್ರಕರಣಗಳಿವೆ. ಆರೋಪಿಯಿಂದ ಹಲ್ಲೆಗೊಳಗಾಗಿರುವ ವಿಜಯಲಕ್ಷ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಅಂಶ ತನಿಖಾಧಿಕಾರಿಯ ವರದಿಯಲ್ಲಿದೆ. <br /> <br /> ಈ ಬಗ್ಗೆ ವೈದ್ಯಕೀಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ. ಆದ ಕಾರಣ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು~ ಎಂದು ಕೋರಿದರು.<br /> <br /> `ದೂರುದಾರರು ಈ ಹಿಂದೆ ಪ್ರಕರಣದ ತನಿಖಾಧಿಕಾರಿ ಎದುರು ನೀಡಿದ್ದ ಹೇಳಿಕೆಯನ್ನು ಪರಿಗಣಿಸಬಾರದು. ದೂರುದಾರರು ಖುದ್ದು ನ್ಯಾಯಾಲಯದಲ್ಲಿ ಹಾಜರಾಗಿ ನೀಡುತ್ತಿರುವ ಹೇಳಿಕೆಯನ್ನೇ ಪರಿಗಣಿಸಬೇಕು ಮತ್ತು ಕಕ್ಷಿದಾರರಿಗೆ ಜಾಮೀನು ನೀಡಬೇಕು~ ಎಂದು ದರ್ಶನ್ ಪರ ವಕೀಲ ಸಿ.ಆರ್.ರಾಘವೇಂದ್ರರೆಡ್ಡಿ ಅವರು ಪ್ರತಿ ವಾದ ಮಂಡಿಸಿದರು.<br /> <br /> ಪ್ರತಿಯಾಗಿ ವಾದಿಸಿದ ಅಮೃತ್ಕುಮಾರ್, `ವಿದ್ಯಾವಂತೆ ಆಗಿರುವ ವಿಜಯಲಕ್ಷ್ಮಿ ಅವರು ಸ್ವಇಚ್ಛೆಯಿಂದಲೇ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಅವರು ಯಾರ ಒತ್ತಡಕ್ಕೂ ಮಣಿದು ದೂರು ಕೊಟ್ಟಿಲ್ಲ. ಆದ್ದರಿಂದ ಅವರ ಈಗಿನ ಹೇಳಿಕೆಯನ್ನು ಪರಿಗಣಿಸಬಾರದು.<br /> <br /> ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಆರೋಪಿ ಪ್ರಭಾವಿ ಆಗಿರುವುದರಿಂದ ಆತನಿಗೆ ಜಾಮೀನು ನೀಡಬಾರದು~ ಎಂದರು. ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಾಧೀಶ ವೆಂಕಟೇಶ್ ಆರ್. ಹುಲಗಿ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿರುವುದಾಗಿ ಹೇಳಿದರು.<br /> <br /> <strong>ಮುಂದುವರೆದ ಚಿಕಿತ್ಸೆ:</strong> ಉಸಿರಾಟದ ತೊಂದರೆ ಇರುವ ಕಾರಣ ನಟ ದರ್ಶನ್ ಅವರಿಗೆ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. `ಸೋಮವಾರ ಬೆಳಿಗ್ಗೆ ದರ್ಶನ್ ಅವರಿಗೆ ಉಸಿರಾಟದ ತೊಂದರೆ ಇತ್ತು. ಆದ್ದರಿಂದ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಸ್ಟಿರಾಯ್ಡ ನೀಡಲಾಗಿದೆ. ಕಾಮಾಲೆ ರೋಗದ ಲಕ್ಷಣಗಳೂ ಅವರಿಗೆ ಇವೆ~ ಎಂದು ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ್ ಬುಗ್ಗಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಮಂಗಳವಾರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪರೀಕ್ಷೆಯ ವರದಿಯ ನಂತರ ಮುಂದೆ ಏನು ಮಾಡಬೇಕೆಂಬುದನ್ನು ನಿರ್ಧರಿಸಲಾಗುತ್ತದೆ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿದೆ.<br /> <br /> ಸೋಮವಾರ ಮಧ್ಯಾಹ್ನ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಎಚ್.ಅಮೃತ್ಕುಮಾರ್ ಅವರು ಆರೋಪಿ ದರ್ಶನ್ ಅವರಿಗೆ ಜಾಮೀನು ನೀಡದಂತೆ ಕೋರಿ ಆಕ್ಷೇಪಣಾ ಅರ್ಜಿ ಸಲ್ಲಿಸಿದರು.<br /> <br /> ನಂತರ ವಾದ ಮಂಡಿಸಿದ ಅಮೃತ್ಕುಮಾರ್ ಅವರು, `ಆರೋಪಿ ವಿರುದ್ಧ ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯ್ದೆಯಂತಹ ಗಂಭೀರ ಸ್ವರೂಪದ ಪ್ರಕರಣಗಳಿವೆ. ಆರೋಪಿಯಿಂದ ಹಲ್ಲೆಗೊಳಗಾಗಿರುವ ವಿಜಯಲಕ್ಷ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಅಂಶ ತನಿಖಾಧಿಕಾರಿಯ ವರದಿಯಲ್ಲಿದೆ. <br /> <br /> ಈ ಬಗ್ಗೆ ವೈದ್ಯಕೀಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ. ಆದ ಕಾರಣ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು~ ಎಂದು ಕೋರಿದರು.<br /> <br /> `ದೂರುದಾರರು ಈ ಹಿಂದೆ ಪ್ರಕರಣದ ತನಿಖಾಧಿಕಾರಿ ಎದುರು ನೀಡಿದ್ದ ಹೇಳಿಕೆಯನ್ನು ಪರಿಗಣಿಸಬಾರದು. ದೂರುದಾರರು ಖುದ್ದು ನ್ಯಾಯಾಲಯದಲ್ಲಿ ಹಾಜರಾಗಿ ನೀಡುತ್ತಿರುವ ಹೇಳಿಕೆಯನ್ನೇ ಪರಿಗಣಿಸಬೇಕು ಮತ್ತು ಕಕ್ಷಿದಾರರಿಗೆ ಜಾಮೀನು ನೀಡಬೇಕು~ ಎಂದು ದರ್ಶನ್ ಪರ ವಕೀಲ ಸಿ.ಆರ್.ರಾಘವೇಂದ್ರರೆಡ್ಡಿ ಅವರು ಪ್ರತಿ ವಾದ ಮಂಡಿಸಿದರು.<br /> <br /> ಪ್ರತಿಯಾಗಿ ವಾದಿಸಿದ ಅಮೃತ್ಕುಮಾರ್, `ವಿದ್ಯಾವಂತೆ ಆಗಿರುವ ವಿಜಯಲಕ್ಷ್ಮಿ ಅವರು ಸ್ವಇಚ್ಛೆಯಿಂದಲೇ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಅವರು ಯಾರ ಒತ್ತಡಕ್ಕೂ ಮಣಿದು ದೂರು ಕೊಟ್ಟಿಲ್ಲ. ಆದ್ದರಿಂದ ಅವರ ಈಗಿನ ಹೇಳಿಕೆಯನ್ನು ಪರಿಗಣಿಸಬಾರದು.<br /> <br /> ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಆರೋಪಿ ಪ್ರಭಾವಿ ಆಗಿರುವುದರಿಂದ ಆತನಿಗೆ ಜಾಮೀನು ನೀಡಬಾರದು~ ಎಂದರು. ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಾಧೀಶ ವೆಂಕಟೇಶ್ ಆರ್. ಹುಲಗಿ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿರುವುದಾಗಿ ಹೇಳಿದರು.<br /> <br /> <strong>ಮುಂದುವರೆದ ಚಿಕಿತ್ಸೆ:</strong> ಉಸಿರಾಟದ ತೊಂದರೆ ಇರುವ ಕಾರಣ ನಟ ದರ್ಶನ್ ಅವರಿಗೆ ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. `ಸೋಮವಾರ ಬೆಳಿಗ್ಗೆ ದರ್ಶನ್ ಅವರಿಗೆ ಉಸಿರಾಟದ ತೊಂದರೆ ಇತ್ತು. ಆದ್ದರಿಂದ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಸ್ಟಿರಾಯ್ಡ ನೀಡಲಾಗಿದೆ. ಕಾಮಾಲೆ ರೋಗದ ಲಕ್ಷಣಗಳೂ ಅವರಿಗೆ ಇವೆ~ ಎಂದು ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ್ ಬುಗ್ಗಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಮಂಗಳವಾರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪರೀಕ್ಷೆಯ ವರದಿಯ ನಂತರ ಮುಂದೆ ಏನು ಮಾಡಬೇಕೆಂಬುದನ್ನು ನಿರ್ಧರಿಸಲಾಗುತ್ತದೆ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>