ರಥಬೀದಿಯ ಸುತ್ತಲೂ ಖುದ್ದು ಪೇಜಾವರ ಸ್ವಾಮೀಜಿ, ವಿಶ್ವಪ್ರಸನ್ನ ಸ್ವಾಮೀಜಿ ಮತ್ತು ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ ಅವರು ಸಾಲು ದೀಪಗಳನ್ನು ಜೋಡಿಸಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿದರು. ಭಕ್ತರೂ ಇದಕ್ಕೆ ಕೈಜೋಡಿಸಿದರು. ಆ ನಂತರ ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಇದೇ 4ರ ವರೆಗೆ ಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ನಡೆಯಲಿದೆ.