ಬೆಂಗಳೂರು: ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಸದಸ್ಯೆ ಕೆ.ಕಮಲಾ ಕುಮಾರಿ ಮಂಗಳವಾರ ನಗರಕ್ಕೆ ಭೇಟಿ ನೀಡಲಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಸಮಸ್ಯೆ ಅಥವಾ ಅಹವಾಲುಗಳು ಇದ್ದಲ್ಲಿ ಮಂಗಳವಾರ ಸಂಜೆ 4ಕ್ಕೆ ನಗರದ ಅರಮನೆ ರಸ್ತೆಯ ಬಾಲಬ್ರೂಯಿ ಅತಿಥಿ ಗೃಹದಲ್ಲಿ ಸಾರ್ವಜನಿಕರು ಅವರನ್ನು ಭೇಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.