<p><strong>ಬೆಳಗಾವಿ: </strong>`ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಮತೀಯ ಹಿಂಸಾಚಾರ ತಡೆ ಮಸೂದೆ ಜಾರಿಗೆ ತಂದು ದೇಶವನ್ನು ಧರ್ಮದ ಆಧಾರದಲ್ಲಿ ಇಬ್ಭಾಗ ಮಾಡಲು ಹೊರಟಿದೆ~ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ ಜೇಟ್ಲಿ ಭಾನುವಾರ ಇಲ್ಲಿ ಆರೋಪಿಸಿದರು. <br /> <br /> ಅಧಿವಕ್ತಾ ಪರಿಷತ್ ಹಮ್ಮಿಕೊಂಡಿದ್ದ `ಮತೀಯ ಹಿಂಸಾಚಾರ ತಡೆ ಮಸೂದೆ- 2011~ ಕುರಿತ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. <br /> <br /> `ಧರ್ಮದ ಆಧಾರದ ಮೇಲೆ ಕಾನೂನು ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಇದು ದೇಶದಲ್ಲಿನ ಕೋಮು ಸೌಹಾರ್ದಕ್ಕೆ ಧಕ್ಕೆ ತರಲಿದೆ. ಈ ಮಸೂದೆ, ಬಹುಸಂಖ್ಯಾತರು ಮಾತ್ರ ಮತೀಯ ಹಿಂಸಾಚಾರ ಮಾಡುತ್ತಾರೆ ಎಂದು ಹೇಳುತ್ತದೆ. ಇದರಲ್ಲಿ ಅಲ್ಪ ಸಂಖ್ಯಾತರನ್ನು ಶಿಕ್ಷಿಸುವ ಬಗ್ಗೆ ಉಲ್ಲೇಖವಿಲ್ಲ. <br /> <br /> ಇದು ಜಾರಿಯಾದರೆ, ಭಯೋತ್ಪಾದನಾ ಸಂಘಟನೆಯವರಿಗೆ ನೇರವಾಗಿ ಮತೀಯ ಹಿಂಸಾಚಾರ ಕೈಗೊಳ್ಳಲು ಅವಕಾಶ ನೀಡಿದಂತಾಗುತ್ತದೆ~ ಎಂದು ಜೇಟ್ಲಿ ಆತಂಕ ವ್ಯಕ್ತಪಡಿಸಿದರು. ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಈ ಮಸೂದೆಯನ್ನು ಅಂಗೀಕರಿಸುವುದಕ್ಕೆ ಬಿಜೆಪಿ ಬಿಡುವುದಿಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>`ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಮತೀಯ ಹಿಂಸಾಚಾರ ತಡೆ ಮಸೂದೆ ಜಾರಿಗೆ ತಂದು ದೇಶವನ್ನು ಧರ್ಮದ ಆಧಾರದಲ್ಲಿ ಇಬ್ಭಾಗ ಮಾಡಲು ಹೊರಟಿದೆ~ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ ಜೇಟ್ಲಿ ಭಾನುವಾರ ಇಲ್ಲಿ ಆರೋಪಿಸಿದರು. <br /> <br /> ಅಧಿವಕ್ತಾ ಪರಿಷತ್ ಹಮ್ಮಿಕೊಂಡಿದ್ದ `ಮತೀಯ ಹಿಂಸಾಚಾರ ತಡೆ ಮಸೂದೆ- 2011~ ಕುರಿತ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. <br /> <br /> `ಧರ್ಮದ ಆಧಾರದ ಮೇಲೆ ಕಾನೂನು ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಇದು ದೇಶದಲ್ಲಿನ ಕೋಮು ಸೌಹಾರ್ದಕ್ಕೆ ಧಕ್ಕೆ ತರಲಿದೆ. ಈ ಮಸೂದೆ, ಬಹುಸಂಖ್ಯಾತರು ಮಾತ್ರ ಮತೀಯ ಹಿಂಸಾಚಾರ ಮಾಡುತ್ತಾರೆ ಎಂದು ಹೇಳುತ್ತದೆ. ಇದರಲ್ಲಿ ಅಲ್ಪ ಸಂಖ್ಯಾತರನ್ನು ಶಿಕ್ಷಿಸುವ ಬಗ್ಗೆ ಉಲ್ಲೇಖವಿಲ್ಲ. <br /> <br /> ಇದು ಜಾರಿಯಾದರೆ, ಭಯೋತ್ಪಾದನಾ ಸಂಘಟನೆಯವರಿಗೆ ನೇರವಾಗಿ ಮತೀಯ ಹಿಂಸಾಚಾರ ಕೈಗೊಳ್ಳಲು ಅವಕಾಶ ನೀಡಿದಂತಾಗುತ್ತದೆ~ ಎಂದು ಜೇಟ್ಲಿ ಆತಂಕ ವ್ಯಕ್ತಪಡಿಸಿದರು. ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಈ ಮಸೂದೆಯನ್ನು ಅಂಗೀಕರಿಸುವುದಕ್ಕೆ ಬಿಜೆಪಿ ಬಿಡುವುದಿಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>