<p><strong>ಕಾರವಾರ: </strong> ಕಾರ್ಖಾನೆಗಾಗಿ ಮೀಸಲಿಟ್ಟಿದ್ದ ಸರ್ಕಾರಿ ಜಮೀನನ್ನು ತಮ್ಮ ಟ್ರಸ್ಟ್ಗೆ ಅಕ್ರಮವಾಗಿ ವರ್ಗಾಯಿಸಿಕೊಂಡಿರುವ ಆರೋಪದ ಮೇಲೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.<br /> <br /> ಆರ್.ವಿ. ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಸಾದ ಹಾಗೂ ಪ್ರಶಾಂತ ವಿರುದ್ಧ ಸಾಮಾಜಿಕ ಕಾರ್ಯಕರ್ತ ಜಯಂತ ತಿನೇಕರ್ ಮಾರ್ಚ್ 10ರಂದು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಶನಿವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಡಿ.ಆರ್.ರೇಣಕೆ ಅವರು ಪ್ರಕರಣದ ತನಿಖೆ ನಡೆಸಲು ಕಾರವಾರ ಲೋಕಾಯುಕ್ತ ಎಸ್ಪಿಗೆ ಸೂಚಿಸಿ, ಏಪ್ರಿಲ್ ತಿಂಗಳ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದರು.<br /> <br /> ‘ಹಳಿಯಾಳ ತಾಲ್ಲೂಕಿನ ಹುಲ್ಲತ್ತಿ ಗ್ರಾಮದ 34.24 ಎಕರೆ ಭೂಮಿಯನ್ನು ಕಾರ್ಖಾನೆಗಾಗಿ ಉದ್ದೇಶಕ್ಕಾಗಿ ಮೀಸಲಿಟ್ಟಿರುವ ಬಗ್ಗೆ 2001ರ ಜನವರಿ 17ರಂದು ರಾಜ್ಯಪತ್ರದಲ್ಲಿ ಪ್ರಕಟವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ 9.12 ಎಕರೆ ಭೂಮಿ ದೇಶಪಾಂಡೆ ನೇತೃತ್ವದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ವರ್ಗಾವಣೆಯಾಗಿದೆ.<br /> <br /> ಆಗ ದೇಶಪಾಂಡೆಯವರು ರಾಜ್ಯದ ಕೈಗಾರಿಕಾ ಸಚಿವರಾಗಿದ್ದರು. ಇದಾದ ನಂತರ ದೇಶಪಾಂಡೆ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಟ್ರಸ್ಟ್ ಹೆಸರಿನಲ್ಲಿ ದೊಡ್ಡ ದೊಟ್ ಕಂಪೆನಿಗಳಿಂದ ಭಾರಿ ಪ್ರಮಾ-ಣದಲ್ಲಿ ದೇಣಿಗೆ ಪಡೆದು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong> ಕಾರ್ಖಾನೆಗಾಗಿ ಮೀಸಲಿಟ್ಟಿದ್ದ ಸರ್ಕಾರಿ ಜಮೀನನ್ನು ತಮ್ಮ ಟ್ರಸ್ಟ್ಗೆ ಅಕ್ರಮವಾಗಿ ವರ್ಗಾಯಿಸಿಕೊಂಡಿರುವ ಆರೋಪದ ಮೇಲೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.<br /> <br /> ಆರ್.ವಿ. ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಸಾದ ಹಾಗೂ ಪ್ರಶಾಂತ ವಿರುದ್ಧ ಸಾಮಾಜಿಕ ಕಾರ್ಯಕರ್ತ ಜಯಂತ ತಿನೇಕರ್ ಮಾರ್ಚ್ 10ರಂದು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಶನಿವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಡಿ.ಆರ್.ರೇಣಕೆ ಅವರು ಪ್ರಕರಣದ ತನಿಖೆ ನಡೆಸಲು ಕಾರವಾರ ಲೋಕಾಯುಕ್ತ ಎಸ್ಪಿಗೆ ಸೂಚಿಸಿ, ಏಪ್ರಿಲ್ ತಿಂಗಳ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದರು.<br /> <br /> ‘ಹಳಿಯಾಳ ತಾಲ್ಲೂಕಿನ ಹುಲ್ಲತ್ತಿ ಗ್ರಾಮದ 34.24 ಎಕರೆ ಭೂಮಿಯನ್ನು ಕಾರ್ಖಾನೆಗಾಗಿ ಉದ್ದೇಶಕ್ಕಾಗಿ ಮೀಸಲಿಟ್ಟಿರುವ ಬಗ್ಗೆ 2001ರ ಜನವರಿ 17ರಂದು ರಾಜ್ಯಪತ್ರದಲ್ಲಿ ಪ್ರಕಟವಾಗಿತ್ತು. ಇದಾದ ಕೆಲವೇ ದಿನಗಳಲ್ಲಿ 9.12 ಎಕರೆ ಭೂಮಿ ದೇಶಪಾಂಡೆ ನೇತೃತ್ವದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ವರ್ಗಾವಣೆಯಾಗಿದೆ.<br /> <br /> ಆಗ ದೇಶಪಾಂಡೆಯವರು ರಾಜ್ಯದ ಕೈಗಾರಿಕಾ ಸಚಿವರಾಗಿದ್ದರು. ಇದಾದ ನಂತರ ದೇಶಪಾಂಡೆ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಟ್ರಸ್ಟ್ ಹೆಸರಿನಲ್ಲಿ ದೊಡ್ಡ ದೊಟ್ ಕಂಪೆನಿಗಳಿಂದ ಭಾರಿ ಪ್ರಮಾ-ಣದಲ್ಲಿ ದೇಣಿಗೆ ಪಡೆದು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>