<p>ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದ್ವಿಪತ್ನಿತ್ವ ಹಗರಣದಲ್ಲಿ ಸಿಲುಕಿದ್ದು, ಇವರ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.<br /> <br /> ಶಶಿಧರ ಬೆಳಗುಂಬ ಎನ್ನುವವರು ಈ ಅರ್ಜಿ ಸಲ್ಲಿಸ್ದ್ದಿದಾರೆ. ಮೊದಲ ಪತ್ನಿ ಅನಿತಾ ಬದುಕಿರುವಾಗಲೇ, ಚಿತ್ರನಟಿ ರಾಧಿಕಾರನ್ನು ಇವರು ವಿವಾಹವಾಗಿದ್ದಾರೆ ಎನ್ನುವುದು ಅವರ ಆರೋಪ.<br /> <br /> ಹಿಂದು ವಿವಾಹ ಕಾಯ್ದೆಯನ್ನು ಉಲ್ಲಂಘಿಸಿ ಇವರು ಎರಡನೇ ಮದುವೆ ಆಗಿರುವ ಹಿನ್ನೆಲೆಯಲ್ಲಿ ಸಂಸದ ಸ್ಥಾನದಿಂದ ಅವರನ್ನು ವಜಾಗೊಳಿಸಲು ಆದೇಶಿಸಬೇಕು ಎಂದು ಅದರಲ್ಲಿ ಕೋರಲಾಗಿದೆ.<br /> <br /> `ಅನಿತಾರ ಜೊತೆ ವಿವಾಹ ಆಗಿರುವ ಬಗ್ಗೆಯಾಗಲೀ ಅಥವಾ ರಾಧಿಕಾರ ಜೊತೆಗಿನ ತಮ್ಮ ಸಂಬಂಧದ ಕುರಿತಾಗಲೀ ಯಾವತ್ತಿಗೂ ಕುಮಾರಸ್ವಾಮಿ ಅಲ್ಲಗಳೆದಿಲ್ಲ. ಹಿಂದು ಜನಾಂಗದ ವ್ಯಕ್ತಿಯೊಬ್ಬರು ಈ ರೀತಿ ದ್ವಿಪತ್ನಿತ್ವ ಅನುಸರಿಸಿರುವುದು ಭಾರತೀಯ ದಂಡ ಸಂಹಿತೆಯ 495ನೇ ಕಲಮಿನ ಅಡಿ ಅಪರಾಧ. ಎಲ್ಲ ಜನತೆಗೂ ಕಾನೂನು ಒಂದೇ ತೆರನಾಗಿ ಇದೆ. ಇವರು ಗಣ್ಯ ವ್ಯಕ್ತಿ ಎಂಬ ಕಾರಣಕ್ಕೆ ಕ್ರಮ ತೆಗೆದುಕೊಳ್ಳದೇ ಇರುವುದು ಸರಿಯಲ್ಲ~ ಎಂದು ಅವರು ದೂರಿದ್ದಾರೆ.<br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ಮುಂದೂಡಿದೆ.<br /> <strong><br /> ತಡೆಯಾಜ್ಞೆ ವಿಸ್ತರಣೆ</strong><br /> ಕೆರೆ ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಇದೇ 25ರವರೆಗೆ ವಿಸ್ತರಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.<br /> <br /> ಕೊಡಗು ಜಿಲ್ಲೆಯ ದೊಡ್ಡರೇಷ್ಮೆಹಡ್ಲು ಕೆರೆ ಕಾಮಗಾರಿಯಲ್ಲಿ ವಂಚನೆ ಎಸಗಿರುವ ಆರೋಪ ಇವರ ಮೇಲಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಕೇಚಮಾಡ ಸರಿತಾ ಪೂಣಚ್ಚ ಅವರು ಲೋಕಾಯುಕ್ತಕ್ಕೆ ದೂರು ದಾಖಲು ಮಾಡ್ದ್ದಿದರು. ಈ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲು ಮಾಡಿದ್ದಾರೆ. ಮಡಿಕೇರಿಯ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಇವುಗಳ ರದ್ದತಿಗೆ ಅವರು ಹೈಕೋರ್ಟ್ ಅನ್ನು ಕೋರಿದ್ದಾರೆ. ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರು ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದ್ವಿಪತ್ನಿತ್ವ ಹಗರಣದಲ್ಲಿ ಸಿಲುಕಿದ್ದು, ಇವರ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.<br /> <br /> ಶಶಿಧರ ಬೆಳಗುಂಬ ಎನ್ನುವವರು ಈ ಅರ್ಜಿ ಸಲ್ಲಿಸ್ದ್ದಿದಾರೆ. ಮೊದಲ ಪತ್ನಿ ಅನಿತಾ ಬದುಕಿರುವಾಗಲೇ, ಚಿತ್ರನಟಿ ರಾಧಿಕಾರನ್ನು ಇವರು ವಿವಾಹವಾಗಿದ್ದಾರೆ ಎನ್ನುವುದು ಅವರ ಆರೋಪ.<br /> <br /> ಹಿಂದು ವಿವಾಹ ಕಾಯ್ದೆಯನ್ನು ಉಲ್ಲಂಘಿಸಿ ಇವರು ಎರಡನೇ ಮದುವೆ ಆಗಿರುವ ಹಿನ್ನೆಲೆಯಲ್ಲಿ ಸಂಸದ ಸ್ಥಾನದಿಂದ ಅವರನ್ನು ವಜಾಗೊಳಿಸಲು ಆದೇಶಿಸಬೇಕು ಎಂದು ಅದರಲ್ಲಿ ಕೋರಲಾಗಿದೆ.<br /> <br /> `ಅನಿತಾರ ಜೊತೆ ವಿವಾಹ ಆಗಿರುವ ಬಗ್ಗೆಯಾಗಲೀ ಅಥವಾ ರಾಧಿಕಾರ ಜೊತೆಗಿನ ತಮ್ಮ ಸಂಬಂಧದ ಕುರಿತಾಗಲೀ ಯಾವತ್ತಿಗೂ ಕುಮಾರಸ್ವಾಮಿ ಅಲ್ಲಗಳೆದಿಲ್ಲ. ಹಿಂದು ಜನಾಂಗದ ವ್ಯಕ್ತಿಯೊಬ್ಬರು ಈ ರೀತಿ ದ್ವಿಪತ್ನಿತ್ವ ಅನುಸರಿಸಿರುವುದು ಭಾರತೀಯ ದಂಡ ಸಂಹಿತೆಯ 495ನೇ ಕಲಮಿನ ಅಡಿ ಅಪರಾಧ. ಎಲ್ಲ ಜನತೆಗೂ ಕಾನೂನು ಒಂದೇ ತೆರನಾಗಿ ಇದೆ. ಇವರು ಗಣ್ಯ ವ್ಯಕ್ತಿ ಎಂಬ ಕಾರಣಕ್ಕೆ ಕ್ರಮ ತೆಗೆದುಕೊಳ್ಳದೇ ಇರುವುದು ಸರಿಯಲ್ಲ~ ಎಂದು ಅವರು ದೂರಿದ್ದಾರೆ.<br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ಮುಂದೂಡಿದೆ.<br /> <strong><br /> ತಡೆಯಾಜ್ಞೆ ವಿಸ್ತರಣೆ</strong><br /> ಕೆರೆ ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಇದೇ 25ರವರೆಗೆ ವಿಸ್ತರಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.<br /> <br /> ಕೊಡಗು ಜಿಲ್ಲೆಯ ದೊಡ್ಡರೇಷ್ಮೆಹಡ್ಲು ಕೆರೆ ಕಾಮಗಾರಿಯಲ್ಲಿ ವಂಚನೆ ಎಸಗಿರುವ ಆರೋಪ ಇವರ ಮೇಲಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಕೇಚಮಾಡ ಸರಿತಾ ಪೂಣಚ್ಚ ಅವರು ಲೋಕಾಯುಕ್ತಕ್ಕೆ ದೂರು ದಾಖಲು ಮಾಡ್ದ್ದಿದರು. ಈ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲು ಮಾಡಿದ್ದಾರೆ. ಮಡಿಕೇರಿಯ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಇವುಗಳ ರದ್ದತಿಗೆ ಅವರು ಹೈಕೋರ್ಟ್ ಅನ್ನು ಕೋರಿದ್ದಾರೆ. ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರು ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>