<p><strong>ಬೆಂಗಳೂರು: </strong>ಮೈಸೂರು ರಾಜಮನೆತನವಾದ ಯದುವಂಶದ ಕೊನೆಯ ಕುಡಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (60) ಅವರು ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.<br /> <br /> ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಅವರು ನಗರದ ಜಯಮಹಲ್ ಅರಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಯಿತು. ಕೂಡಲೇ ಅವರನ್ನು ವಸಂತನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಯಿತು. 3.30ಕ್ಕೆ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದರು.<br /> <br /> ‘ಅವರನ್ನು ಆಸ್ಪತ್ರೆಗೆ ಕರೆತಂದಾಗಲೇ ಅವರ ಉಸಿರಾಟ ನಿಂತಿತ್ತು. ಕೂಡಲೇ ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಹೃದ್ರೋಗ ತಜ್ಞರ ತಂಡ ಸುಮಾರು ಒಂದೂವರೆ ಗಂಟೆ ಚಿಕಿತ್ಸೆ ನಡೆಸಿತು. ಆದರೆ ಪ್ರಯೋಜನವಾಗಲಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ.ಮದನ್ ತಿಳಿಸಿದರು.<br /> <br /> ‘15 ದಿನಗಳ ಹಿಂದೆ ಎದೆನೋವಿನ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಲಘು ಹೃದಯಾಘಾತವಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚೇತರಿಕೆ ಕಂಡ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು’ ಎಂದು ಹೇಳಿದರು.<br /> <br /> ಒಡೆಯರ್ ಪತ್ನಿ ಪ್ರಮೋದಾದೇವಿ ಸಂಜೆ 5.15ರ ವೇಳೆಗೆ ಆಸ್ಪತ್ರೆಗೆ ಬಂದರು. ಅವರ ಹಿಂದೆಯೇ ಕುಟುಂಬ ಸದಸ್ಯರು, ಕುಟುಂಬದ ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ರಾತ್ರಿ 9 ಗಂಟೆಗೆ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಯಿತು.</p>.<p><br /> <strong>ಆಸ್ಪತ್ರೆ ಎದುರು ಜಮಾಯಿಸಿದ ಜನ:</strong> ಒಡೆಯರ್ ನಿಧನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಆಸ್ಪತ್ರೆಯ ಎದುರು ಜಮಾಯಿಸಿದರು. ಸಂಜೆ 4 ಗಂಟೆ ನಂತರ ಮಿಲ್ಲರ್ಸ್ ರಸ್ತೆಯಲ್ಲಿ ಅಲಿಅಕ್ಬರ್ ರಸ್ತೆ ಮತ್ತು ಕನ್ನಿಂಗ್ಹ್ಯಾಮ್ ರಸ್ತೆ ನಡುವೆ ಸಂಚಾರ ನಿರ್ಬಂಧಿಸಲಾಗಿತ್ತು.<br /> <br /> ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬರುವ ಕುಟುಂಬ ಸದಸ್ಯರು ಹಾಗೂ ಗಣ್ಯವ್ಯಕ್ತಿಗಳಿಗೆ ಮಾತ್ರ ಆಸ್ಪತ್ರೆಗೆ ಪ್ರವೇಶ ನೀಡಲಾಯಿತು. ಆಸ್ಪತ್ರೆಯ ಪ್ರವೇಶದ್ವಾರದ ಎದುರು ಬ್ಯಾರಿಕೇಡ್ಗಳನ್ನು ಹಾಕಿದ್ದ ಪೊಲೀಸರು ಜನದಟ್ಟಣೆಯನ್ನು ನಿಯಂತ್ರಿಸಲು ಕಷ್ಟಪಟ್ಟರು.<br /> <br /> <strong>ಇಂದು ಸರ್ಕಾರಿ ರಜೆ, 2 ದಿನ ಶೋಕ</strong><br /> ಒಡೆಯರ್ ಗೌರವಾರ್ಥ ರಾಜ್ಯ ದಾದ್ಯಂತ ಬುಧವಾರ (ಡಿ. 11) ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಬ್ಯಾಂಕುಗಳಿಗೆ ರಜೆ ಇರುವುದಿಲ್ಲ. ಬುಧವಾರ ಮತ್ತು ಗುರುವಾರ ಶೋಕಾಚರಣೆ ಇರು ತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮನರಂಜನಾ ಕಾರ್ಯಕ್ರ ಗಳನ್ನು ರದ್ದುಪಡಿಸ ಲಾಗಿದೆ ಎಂದು ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮೈಸೂರು ರಾಜಮನೆತನವಾದ ಯದುವಂಶದ ಕೊನೆಯ ಕುಡಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (60) ಅವರು ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.<br /> <br /> ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಅವರು ನಗರದ ಜಯಮಹಲ್ ಅರಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಮಧ್ಯಾಹ್ನ 1.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಯಿತು. ಕೂಡಲೇ ಅವರನ್ನು ವಸಂತನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಯಿತು. 3.30ಕ್ಕೆ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದರು.<br /> <br /> ‘ಅವರನ್ನು ಆಸ್ಪತ್ರೆಗೆ ಕರೆತಂದಾಗಲೇ ಅವರ ಉಸಿರಾಟ ನಿಂತಿತ್ತು. ಕೂಡಲೇ ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಹೃದ್ರೋಗ ತಜ್ಞರ ತಂಡ ಸುಮಾರು ಒಂದೂವರೆ ಗಂಟೆ ಚಿಕಿತ್ಸೆ ನಡೆಸಿತು. ಆದರೆ ಪ್ರಯೋಜನವಾಗಲಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ.ಮದನ್ ತಿಳಿಸಿದರು.<br /> <br /> ‘15 ದಿನಗಳ ಹಿಂದೆ ಎದೆನೋವಿನ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಲಘು ಹೃದಯಾಘಾತವಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚೇತರಿಕೆ ಕಂಡ ಬಳಿಕ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು’ ಎಂದು ಹೇಳಿದರು.<br /> <br /> ಒಡೆಯರ್ ಪತ್ನಿ ಪ್ರಮೋದಾದೇವಿ ಸಂಜೆ 5.15ರ ವೇಳೆಗೆ ಆಸ್ಪತ್ರೆಗೆ ಬಂದರು. ಅವರ ಹಿಂದೆಯೇ ಕುಟುಂಬ ಸದಸ್ಯರು, ಕುಟುಂಬದ ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ರಾತ್ರಿ 9 ಗಂಟೆಗೆ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಯಿತು.</p>.<p><br /> <strong>ಆಸ್ಪತ್ರೆ ಎದುರು ಜಮಾಯಿಸಿದ ಜನ:</strong> ಒಡೆಯರ್ ನಿಧನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಆಸ್ಪತ್ರೆಯ ಎದುರು ಜಮಾಯಿಸಿದರು. ಸಂಜೆ 4 ಗಂಟೆ ನಂತರ ಮಿಲ್ಲರ್ಸ್ ರಸ್ತೆಯಲ್ಲಿ ಅಲಿಅಕ್ಬರ್ ರಸ್ತೆ ಮತ್ತು ಕನ್ನಿಂಗ್ಹ್ಯಾಮ್ ರಸ್ತೆ ನಡುವೆ ಸಂಚಾರ ನಿರ್ಬಂಧಿಸಲಾಗಿತ್ತು.<br /> <br /> ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬರುವ ಕುಟುಂಬ ಸದಸ್ಯರು ಹಾಗೂ ಗಣ್ಯವ್ಯಕ್ತಿಗಳಿಗೆ ಮಾತ್ರ ಆಸ್ಪತ್ರೆಗೆ ಪ್ರವೇಶ ನೀಡಲಾಯಿತು. ಆಸ್ಪತ್ರೆಯ ಪ್ರವೇಶದ್ವಾರದ ಎದುರು ಬ್ಯಾರಿಕೇಡ್ಗಳನ್ನು ಹಾಕಿದ್ದ ಪೊಲೀಸರು ಜನದಟ್ಟಣೆಯನ್ನು ನಿಯಂತ್ರಿಸಲು ಕಷ್ಟಪಟ್ಟರು.<br /> <br /> <strong>ಇಂದು ಸರ್ಕಾರಿ ರಜೆ, 2 ದಿನ ಶೋಕ</strong><br /> ಒಡೆಯರ್ ಗೌರವಾರ್ಥ ರಾಜ್ಯ ದಾದ್ಯಂತ ಬುಧವಾರ (ಡಿ. 11) ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಬ್ಯಾಂಕುಗಳಿಗೆ ರಜೆ ಇರುವುದಿಲ್ಲ. ಬುಧವಾರ ಮತ್ತು ಗುರುವಾರ ಶೋಕಾಚರಣೆ ಇರು ತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮನರಂಜನಾ ಕಾರ್ಯಕ್ರ ಗಳನ್ನು ರದ್ದುಪಡಿಸ ಲಾಗಿದೆ ಎಂದು ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>