ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ನಗರದ ಫರ್ಜಿ ಕೆಫೆಯಲ್ಲಿ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ಮೇಲಿನ ತೀರ್ಪನ್ನು ಹೈಕೋರ್ಟ್ ಗುರುವಾರಕ್ಕೆ (ಜೂ.14) ಕಾಯ್ದಿರಿಸಿದೆ.
ಈ ಕುರಿತಂತೆ ಮೊಹಮದ್ ನಲಪಾಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಆದೇಶದ ಉಕ್ತಲೇಖನವನ್ನು ನಾಳೆ (ಜೂ.14) ನ್ಯಾಯಾಲಯದ ತೆರೆದ ಕಲಾಪದಲ್ಲಿಯೇ ನೀಡುವುದಾಗಿ ನ್ಯಾಯಪೀಠ ತಿಳಿಸಿತು.