<p>ಬೆಂಗಳೂರು: ಉದ್ಯಮಿ ಆರ್.ಎನ್.ನಾಯಕ ಅವರನ್ನು ಕೊಲೆ ಮಾಡಿದ ಗುಂಪಿನ ಸದಸ್ಯರಲ್ಲಿ ಒಬ್ಬನಾದ ಸತೀಶ್ ಅಲಿಯಾಸ್ ಜಗದೀಶ್ ಪಾಟೀಲ್ (19) ಎಂಬಾತನನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.<br /> <br /> ‘ನಾಯಕ ಅವರ ಗನ್ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದವನ ಹೆಸರು ವಿವೇಕ್ಕುಮಾರ್ ಉಪಾಧ್ಯಾಯ (27). ಸತೀಶ್ ಮತ್ತು ವಿವೇಕ್ ಇಬ್ಬರೂ ಉತ್ತರಪ್ರದೇಶದ ವಾರಾಣಸಿಯವರು’ ಎಂದು ಹೇಳಿದರು.<br /> <br /> ಈ ವ್ಯವಸ್ಥಿತ ಸಂಚಿನ ಹಿಂದೆ ಹಲವರ ಪಾತ್ರ ಇದೆ. ನಾಯಕ್ ಅವರಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಇತ್ತು. ಭೂಗತ ಪಾತಕಿಗಳು ಅವರಿಗೆ ಆಗಾಗ್ಗೆ ಕರೆ ಮಾಡಿ ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಈ ಕಾರಣಕ್ಕಾಗಿ ಇಲಾಖೆಯಿಂದ ಅವರಿಗೆ ಗನ್ಮ್ಯಾನ್ ನೀಡಲಾಗಿತ್ತು ಎಂದು ಮಾಹಿತಿ ನೀಡಿದರು.<br /> <br /> <strong>ನಗದು ಬಹುಮಾನ</strong><br /> ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೆಬಲ್ ರಮೇಶ್ಗೌಡ ಅವರಿಗೆ ₨ 25 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಅವರು ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಪಿಗಳ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ. ಅವರ ಸಮಯಪ್ರಜ್ಞೆ ಮತ್ತು ಧೈರ್ಯ ಪ್ರಶಂಸನೀಯ ಎಂದು ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಉದ್ಯಮಿ ಆರ್.ಎನ್.ನಾಯಕ ಅವರನ್ನು ಕೊಲೆ ಮಾಡಿದ ಗುಂಪಿನ ಸದಸ್ಯರಲ್ಲಿ ಒಬ್ಬನಾದ ಸತೀಶ್ ಅಲಿಯಾಸ್ ಜಗದೀಶ್ ಪಾಟೀಲ್ (19) ಎಂಬಾತನನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.<br /> <br /> ‘ನಾಯಕ ಅವರ ಗನ್ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದವನ ಹೆಸರು ವಿವೇಕ್ಕುಮಾರ್ ಉಪಾಧ್ಯಾಯ (27). ಸತೀಶ್ ಮತ್ತು ವಿವೇಕ್ ಇಬ್ಬರೂ ಉತ್ತರಪ್ರದೇಶದ ವಾರಾಣಸಿಯವರು’ ಎಂದು ಹೇಳಿದರು.<br /> <br /> ಈ ವ್ಯವಸ್ಥಿತ ಸಂಚಿನ ಹಿಂದೆ ಹಲವರ ಪಾತ್ರ ಇದೆ. ನಾಯಕ್ ಅವರಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಇತ್ತು. ಭೂಗತ ಪಾತಕಿಗಳು ಅವರಿಗೆ ಆಗಾಗ್ಗೆ ಕರೆ ಮಾಡಿ ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಈ ಕಾರಣಕ್ಕಾಗಿ ಇಲಾಖೆಯಿಂದ ಅವರಿಗೆ ಗನ್ಮ್ಯಾನ್ ನೀಡಲಾಗಿತ್ತು ಎಂದು ಮಾಹಿತಿ ನೀಡಿದರು.<br /> <br /> <strong>ನಗದು ಬಹುಮಾನ</strong><br /> ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೆಬಲ್ ರಮೇಶ್ಗೌಡ ಅವರಿಗೆ ₨ 25 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಅವರು ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಪಿಗಳ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ. ಅವರ ಸಮಯಪ್ರಜ್ಞೆ ಮತ್ತು ಧೈರ್ಯ ಪ್ರಶಂಸನೀಯ ಎಂದು ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>