<p>ಶಿವಮೊಗ್ಗ (ಪಿಟಿಐ): ಕರ್ನಾಟಕದ ನಾಯಕತ್ವ ಪ್ರಶ್ನೆ ಬಗೆ ಹರಿದಿದ್ದು ಸದಾನಂದ ಗೌಡ ಅವರೇ ಉಳಿದ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಶನಿವಾರ ಇಲ್ಲಿ ಪ್ರತಿಪಾದಿಸಿದರು.<br /> <br /> ~ಕೇಂದ್ರ ನಾಯಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಮಾತನಾಡಿದ್ದಾರೆ ಮತ್ತು ನಾಯಕತ್ವ ಪ್ರಶ್ನೆ ಬಗೆ ಹರಿದಿದೆ~ ಎಂದು ಅವರು ವರದಿಗಾರರಿಗೆ ತಿಳಿಸಿದರು.<br /> <br /> ಮಾರ್ಚ್ 30ರಂದು ಮುಕ್ತಾಯಗೊಳ್ಳಲಿರುವ ಮುಂಗಪತ್ರ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮತ್ತು ಮಂಡಳಿ ಹಾಗೂ ನಿಗಮಗಳಿಗೆ ನೇಮಕಾತಿ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಈಶ್ವರಪ್ಪ ಉತ್ತರಿಸಿದರು.<br /> <br /> ಈ ಮಧ್ಯೆ ವೈದ್ಯಕೀಯ ಶಿಕ್ಷಣ ಸಚಿವ ಎ.ರಾಮದಾಸ್ ಅವರು ಪಕ್ಷದಲ್ಲಿನ ಬಿಕ್ಕಟ್ಟು ಏಪ್ರಿಲ್ 15ರ ವೇಳೆಗೆ ಅಂತ್ಯಗೊಳ್ಳುವುದು ಎಂದು ಹೇಳಿದ್ದಾರೆ.<br /> <br /> ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಕ್ಕಟ್ಟು ಇತ್ಯರ್ಥದ ಬಳಿಕ ಬಿಜೆಪಿಗೆ ಧಕ್ಕೆ ಉಂಟು ಮಾಡಿದ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಷಾದ ವ್ಯಕ್ತ ಪಡಿಸುವ ಸಲುವಾಗಿ ಪಕ್ಷದ ನಾಯಕರು ರಾಜ್ಯವ್ಯಾಪಿ ಪ್ರವಾಸ ಮಾಡಲಿದ್ದಾರೆ ಎಂದು ಅವರು ವರದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ (ಪಿಟಿಐ): ಕರ್ನಾಟಕದ ನಾಯಕತ್ವ ಪ್ರಶ್ನೆ ಬಗೆ ಹರಿದಿದ್ದು ಸದಾನಂದ ಗೌಡ ಅವರೇ ಉಳಿದ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಶನಿವಾರ ಇಲ್ಲಿ ಪ್ರತಿಪಾದಿಸಿದರು.<br /> <br /> ~ಕೇಂದ್ರ ನಾಯಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಮಾತನಾಡಿದ್ದಾರೆ ಮತ್ತು ನಾಯಕತ್ವ ಪ್ರಶ್ನೆ ಬಗೆ ಹರಿದಿದೆ~ ಎಂದು ಅವರು ವರದಿಗಾರರಿಗೆ ತಿಳಿಸಿದರು.<br /> <br /> ಮಾರ್ಚ್ 30ರಂದು ಮುಕ್ತಾಯಗೊಳ್ಳಲಿರುವ ಮುಂಗಪತ್ರ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮತ್ತು ಮಂಡಳಿ ಹಾಗೂ ನಿಗಮಗಳಿಗೆ ನೇಮಕಾತಿ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಈಶ್ವರಪ್ಪ ಉತ್ತರಿಸಿದರು.<br /> <br /> ಈ ಮಧ್ಯೆ ವೈದ್ಯಕೀಯ ಶಿಕ್ಷಣ ಸಚಿವ ಎ.ರಾಮದಾಸ್ ಅವರು ಪಕ್ಷದಲ್ಲಿನ ಬಿಕ್ಕಟ್ಟು ಏಪ್ರಿಲ್ 15ರ ವೇಳೆಗೆ ಅಂತ್ಯಗೊಳ್ಳುವುದು ಎಂದು ಹೇಳಿದ್ದಾರೆ.<br /> <br /> ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಕ್ಕಟ್ಟು ಇತ್ಯರ್ಥದ ಬಳಿಕ ಬಿಜೆಪಿಗೆ ಧಕ್ಕೆ ಉಂಟು ಮಾಡಿದ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಷಾದ ವ್ಯಕ್ತ ಪಡಿಸುವ ಸಲುವಾಗಿ ಪಕ್ಷದ ನಾಯಕರು ರಾಜ್ಯವ್ಯಾಪಿ ಪ್ರವಾಸ ಮಾಡಲಿದ್ದಾರೆ ಎಂದು ಅವರು ವರದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>