ಅಂತರರಾಜ್ಯ ನದಿ ವಿವಾದ ಕಾಯ್ದೆ ಸೆಕ್ಷನ್ (6 ಎ) ಪ್ರಕಾರ ಕೇಂದ್ರ ಸರ್ಕಾರ ಆರು ವಾರದೊಳಗೆ ನೀರು ಹಂಚಿಕೆಗೆ ಸಂಬಂಧಿಸಿದಂತೆ ಯೋಜನೆ (ಸ್ಕೀಮ್) ರೂಪಿಸಬೇಕು ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಮಂಡಳಿಯನ್ನು ಯಾವ ರೀತಿ ರಚನೆ ಮಾಡುತ್ತಾರೆಂಬುದು ಗೊತ್ತಿಲ್ಲ. ತೀರ್ಪಿನಿಂದ ರಾಜ್ಯದ ಹಿತಾಸಕ್ತಿಗೆ ತೊಂದರೆ ಆಗುವ ಬಗ್ಗೆ ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ಈ ಎಲ್ಲ ವಿಷಯಗಳನ್ನು ನಾರಿಮನ್ ಜೊತೆ ಚರ್ಚೆ ನಡೆಸಲಾಗುವುದು ಎಂದರು.