<p><strong>ಬೆಂಗಳೂರು:</strong> `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದಲ್ಲಿ ಶನಿವಾರ ನಾಲ್ಕು ಮಹತ್ವದ ಪ್ರಕರಣಗಳ ವಿಚಾರಣೆ ನಡೆಯಲಿದೆ. ಎಲ್ಲ ಪ್ರಕರಣಗಳೂ ರಾಜ್ಯ ರಾಜಕೀಯದಲ್ಲಿ ಪ್ರಭಾವಿಯಾಗಿರುವ ಮೂರು ಕುಟುಂಬಗಳಿಗೆ ಸಂಬಂಧಿಸಿವೆ.<br /> <br /> ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ. <br /> <br /> ಮತ್ತೊಬ್ಬ ವಕೀಲ ವಿನೋದ್ಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ವಿರುದ್ಧ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯೂ ಇದೇ ವೇಳೆ ನಡೆಯಲಿದೆ.<br /> ಕುಮಾರಸ್ವಾಮಿ ಅವರ ಸಹೋದರ ಬಾಲಕೃಷ್ಣಗೌಡ ಅವರ ವಿರುದ್ಧ ಭದ್ರಾವತಿ ಮೂಲದ ಎಸ್. ಎನ್. ಬಾಲಕೃಷ್ಣ ಸಲ್ಲಿಸಿರುವ ಖಾಸಗಿ ದೂರು ಕೂಡ ವಿಚಾರಣೆಗೆ ಬರಲಿದೆ.<br /> <br /> ಕೆಐಎಡಿಬಿ ಭೂ ಹಗರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವೈದ್ಯಕೀಯ ಕಾರಣಗಳ ಆಧಾರದಲ್ಲಿ ಜಾಮೀನು ಕೋರಿ ರುವ ಅರ್ಜಿ ಬಗ್ಗೆ ಲೋಕಾಯುಕ್ತ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸುವ ಆಕ್ಷೇಪಣೆ ಬಗ್ಗೆಯೂ ವಿಚಾರಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದಲ್ಲಿ ಶನಿವಾರ ನಾಲ್ಕು ಮಹತ್ವದ ಪ್ರಕರಣಗಳ ವಿಚಾರಣೆ ನಡೆಯಲಿದೆ. ಎಲ್ಲ ಪ್ರಕರಣಗಳೂ ರಾಜ್ಯ ರಾಜಕೀಯದಲ್ಲಿ ಪ್ರಭಾವಿಯಾಗಿರುವ ಮೂರು ಕುಟುಂಬಗಳಿಗೆ ಸಂಬಂಧಿಸಿವೆ.<br /> <br /> ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ. <br /> <br /> ಮತ್ತೊಬ್ಬ ವಕೀಲ ವಿನೋದ್ಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ವಿರುದ್ಧ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯೂ ಇದೇ ವೇಳೆ ನಡೆಯಲಿದೆ.<br /> ಕುಮಾರಸ್ವಾಮಿ ಅವರ ಸಹೋದರ ಬಾಲಕೃಷ್ಣಗೌಡ ಅವರ ವಿರುದ್ಧ ಭದ್ರಾವತಿ ಮೂಲದ ಎಸ್. ಎನ್. ಬಾಲಕೃಷ್ಣ ಸಲ್ಲಿಸಿರುವ ಖಾಸಗಿ ದೂರು ಕೂಡ ವಿಚಾರಣೆಗೆ ಬರಲಿದೆ.<br /> <br /> ಕೆಐಎಡಿಬಿ ಭೂ ಹಗರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವೈದ್ಯಕೀಯ ಕಾರಣಗಳ ಆಧಾರದಲ್ಲಿ ಜಾಮೀನು ಕೋರಿ ರುವ ಅರ್ಜಿ ಬಗ್ಗೆ ಲೋಕಾಯುಕ್ತ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸುವ ಆಕ್ಷೇಪಣೆ ಬಗ್ಗೆಯೂ ವಿಚಾರಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>