ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎಂ.ಸಿ. ಅಶ್ವಥ್ ಅವರು ಕೇವಲ 2 ವರ್ಷಗಳ ಅವಧಿಯಲ್ಲಿ ರೂ 84.39 ಲಕ್ಷ ಭತ್ಯೆ ಪಡೆದು ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ಸಾಬೂನು ಕಾರ್ಖಾನೆ ಅಧ್ಯಕ್ಷ ಶಿವಾನಂದ ನಾಯಕ ರೂ 84.13 ಲಕ್ಷ, ರಾಜ್ಯ ಕರಕುಶಲ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಲಲಿತಾ ರಾಣಿ ಶ್ರೀರಂಗದೇವರಾಯಲು ಅವರಿಗೆ ರೂ 51.01 ಲಕ್ಷ ಪಾವತಿಯಾಗಿದೆ. ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಶಂಕರಗೌಡ ಹರವಿ ಅವರು ರೂ 38.21 ಲಕ್ಷ ಪಡೆದುಕೊಂಡಿದ್ದಾರೆ ಎಂಬುದು ಮೂಡಲಗಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡಿ ಮಾಹಿತಿಯಿಂದ ಬಹಿರಂಗಗೊಂಡಿದೆ.