ಬೆಂಗಳೂರು: ಇದೇ 17 ರಂದು (ಭಾನುವಾರ) ನವದೆಹಲಿಯಲ್ಲಿ ನಡೆಯುವ ‘ನೀತಿ ಆಯೋಗ’ದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯೊಬ್ಬರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೀತಿ ಆಯೋಗದ ಸಭೆಗೆ ಹೋಗುತ್ತಿರಲಿಲ್ಲ. ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಭಾಗವಹಿಸಲು ಶನಿವಾರವೇ ದೆಹಲಿಗೆ ತೆರಳಲಿದ್ದಾರೆ.