ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ನೈರುತ್ಯ ಮಾರುತವು ಕರಾವಳಿಯಲ್ಲಿ ಕ್ಷೀಣಿಸಿದೆ. ಕರಾವಳಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗಿದೆ.
ಮಂಕಿ 4 ಸೆಂ.ಮೀ, ಮೂಡಬಿದರೆ, ಬೆಳ್ತಂಗಡಿ, ಭಟ್ಕಳ, ಹೊನ್ನಾವರ, ಆಗುಂಬೆ 3, ಸೆಂ.ಮೀ. ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ, ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.