<p><strong>ಬೆಂಗಳೂರು: </strong>`ಜಾತಿ ಮತ್ತು ಹಣದ ರಾಜಕಾರಣದಿಂದ ಬಿಜೆಪಿ ಬೆಳೆಯಲಿಲ್ಲ. ಆದರೆ, ಈಗ ತಮ್ಮ ಪಕ್ಷದಲ್ಲೂ ಜಾತಿ ರಾಜಕಾರಣ ನುಸುಳಿದೆ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.<br /> <br /> ಪಕ್ಷದ ಪ್ರಧಾನ ಕಚೇರಿ `ಜಗನ್ನಾಥ ಭವನ~ದಲ್ಲಿ ಶುಕ್ರವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ಬೆಳವಣಿಗೆಗಳಿಂದ ಪಕ್ಷದ ತತ್ವ, ಸಿದ್ಧಾಂತ ಮತ್ತು ವಿಚಾರಗಳಿಗೆ ತುಸು ಕುಂದು ಉಂಟಾಗಿದೆ. ಈ ಗೊಂದಲದಿಂದ ಪಕ್ಷದ ಕಾರ್ಯಕರ್ತರು ನಿರಾಶರಾಗಬೇಕಿಲ್ಲ. ಪಕ್ಷ ತನ್ನ ತತ್ವ ಮತ್ತು ಸಿದ್ಧಾಂತಗಳ ಆಧಾರದಲ್ಲೇ ಮುನ್ನಡೆಯುತ್ತದೆ~ ಎಂದರು.<br /> <br /> `ಯಾವುದೇ ಸ್ಥಾನಮಾನ ಅಪೇಕ್ಷಿಸದೇ, ಜಾತಿ ರಾಜಕಾರಣ ಮಾಡದೇ ಸಾವಿರಾರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅಂತಹವರಿಗೆ ಈವರೆಗೂ ಯಾವುದೇ ಸ್ಥಾನಮಾನ ದೊರೆತಿಲ್ಲ. ಆದರೆ, ಸ್ಥಾನಮಾನ ಕೇಳುವವರಿಂದಾಗಿ ಗೊಂದಲ ಉಂಟಾಗುತ್ತಿದೆ~ ಎಂದರು.<br /> <br /> ಜನಸಂಘವು ದೇಶಕ್ಕಾಗಿ ಬಿಜೆಪಿಯನ್ನು ಕಟ್ಟಿ, ಬೆಳೆಸಿತು. ನೂರಾರು ಜನರ ತ್ಯಾಗ, ಬಲಿದಾನಗಳಿಂದ ಪಕ್ಷ ದೊಡ್ಡಮಟ್ಟಕ್ಕೆ ಬೆಳೆದಿದೆ. ಶ್ಯಾಂ ಪ್ರಸಾದ್ ಮುಖರ್ಜಿ, ದೀನ್ದಯಾಳ್ ಉಪಾಧ್ಯಾಯರಂಥ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಪಕ್ಷ ಮುನ್ನಡೆಯಬೇಕಿದೆ ಎಂದರು.<br /> <br /> <strong>150 ಸ್ಥಾನ ಖಚಿತ: </strong>ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರೊಂದಿಗೆ ಸಂವಾದ ನಡೆಸಿದ ಈಶ್ವರಪ್ಪ, `ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ. ಮುಂದಿನ ಚುನಾವಣೆಗೆ ಪಕ್ಷ ಸರ್ವಸನ್ನದ್ಧವಾಗಿದೆ~ ಎಂದು ಭರವಸೆ ನೀಡಿದರು.<br /> <br /> ವಿಧಾನ ಪರಿಷತ್ ಉಪ ಸಭಾಪತಿ ವಿಮಲಾ ಗೌಡ, `ಹಿಂದೆ ಬಿಜೆಪಿ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳೇ ಇರುತ್ತಿರಲಿಲ್ಲ. ಠೇವಣಿ ದೊರೆತ ಸಂತಸಕ್ಕೆ ಸಿಹಿ ಹಂಚಲಾಗುತ್ತಿತ್ತು. ಈಗ ಕಾಲ ಬದಲಾಗಿದೆ. ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿದಿದ್ದೇವೆ ಎಂದರು.<br /> <br /> ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಎನ್.ವಿಜಯಕುಮಾರ್, ಬೆಂಗಳೂರು ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಮಾಜಿ ಶಾಸಕ ನಿರ್ಮಲ್ಕುಮಾರ್ ಸುರಾನಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಜಾತಿ ಮತ್ತು ಹಣದ ರಾಜಕಾರಣದಿಂದ ಬಿಜೆಪಿ ಬೆಳೆಯಲಿಲ್ಲ. ಆದರೆ, ಈಗ ತಮ್ಮ ಪಕ್ಷದಲ್ಲೂ ಜಾತಿ ರಾಜಕಾರಣ ನುಸುಳಿದೆ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.<br /> <br /> ಪಕ್ಷದ ಪ್ರಧಾನ ಕಚೇರಿ `ಜಗನ್ನಾಥ ಭವನ~ದಲ್ಲಿ ಶುಕ್ರವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ಬೆಳವಣಿಗೆಗಳಿಂದ ಪಕ್ಷದ ತತ್ವ, ಸಿದ್ಧಾಂತ ಮತ್ತು ವಿಚಾರಗಳಿಗೆ ತುಸು ಕುಂದು ಉಂಟಾಗಿದೆ. ಈ ಗೊಂದಲದಿಂದ ಪಕ್ಷದ ಕಾರ್ಯಕರ್ತರು ನಿರಾಶರಾಗಬೇಕಿಲ್ಲ. ಪಕ್ಷ ತನ್ನ ತತ್ವ ಮತ್ತು ಸಿದ್ಧಾಂತಗಳ ಆಧಾರದಲ್ಲೇ ಮುನ್ನಡೆಯುತ್ತದೆ~ ಎಂದರು.<br /> <br /> `ಯಾವುದೇ ಸ್ಥಾನಮಾನ ಅಪೇಕ್ಷಿಸದೇ, ಜಾತಿ ರಾಜಕಾರಣ ಮಾಡದೇ ಸಾವಿರಾರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅಂತಹವರಿಗೆ ಈವರೆಗೂ ಯಾವುದೇ ಸ್ಥಾನಮಾನ ದೊರೆತಿಲ್ಲ. ಆದರೆ, ಸ್ಥಾನಮಾನ ಕೇಳುವವರಿಂದಾಗಿ ಗೊಂದಲ ಉಂಟಾಗುತ್ತಿದೆ~ ಎಂದರು.<br /> <br /> ಜನಸಂಘವು ದೇಶಕ್ಕಾಗಿ ಬಿಜೆಪಿಯನ್ನು ಕಟ್ಟಿ, ಬೆಳೆಸಿತು. ನೂರಾರು ಜನರ ತ್ಯಾಗ, ಬಲಿದಾನಗಳಿಂದ ಪಕ್ಷ ದೊಡ್ಡಮಟ್ಟಕ್ಕೆ ಬೆಳೆದಿದೆ. ಶ್ಯಾಂ ಪ್ರಸಾದ್ ಮುಖರ್ಜಿ, ದೀನ್ದಯಾಳ್ ಉಪಾಧ್ಯಾಯರಂಥ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಪಕ್ಷ ಮುನ್ನಡೆಯಬೇಕಿದೆ ಎಂದರು.<br /> <br /> <strong>150 ಸ್ಥಾನ ಖಚಿತ: </strong>ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರೊಂದಿಗೆ ಸಂವಾದ ನಡೆಸಿದ ಈಶ್ವರಪ್ಪ, `ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ. ಮುಂದಿನ ಚುನಾವಣೆಗೆ ಪಕ್ಷ ಸರ್ವಸನ್ನದ್ಧವಾಗಿದೆ~ ಎಂದು ಭರವಸೆ ನೀಡಿದರು.<br /> <br /> ವಿಧಾನ ಪರಿಷತ್ ಉಪ ಸಭಾಪತಿ ವಿಮಲಾ ಗೌಡ, `ಹಿಂದೆ ಬಿಜೆಪಿ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳೇ ಇರುತ್ತಿರಲಿಲ್ಲ. ಠೇವಣಿ ದೊರೆತ ಸಂತಸಕ್ಕೆ ಸಿಹಿ ಹಂಚಲಾಗುತ್ತಿತ್ತು. ಈಗ ಕಾಲ ಬದಲಾಗಿದೆ. ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿದಿದ್ದೇವೆ ಎಂದರು.<br /> <br /> ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಎನ್.ವಿಜಯಕುಮಾರ್, ಬೆಂಗಳೂರು ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಮಾಜಿ ಶಾಸಕ ನಿರ್ಮಲ್ಕುಮಾರ್ ಸುರಾನಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>