<p><strong>ಬೆಂಗಳೂರು:</strong> ಪತ್ನಿ ವಿಜಯಲಕ್ಷ್ಮಿ ಮೇಲೆ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಶುಕ್ರವಾರ ವಿಜಯನಗರ ಪೊಲೀಸರು ಬಂಧಿಸಿದ್ದಾರೆ.<br /> <br /> ವಿಜಯಲಕ್ಷ್ಮಿ ಅವರು ಶುಕ್ರವಾರ ಸಂಜೆ ವಿಜಯನಗರದಲ್ಲಿರುವ ತಮ್ಮ ಗೆಳತಿ ವಿದ್ಯಾ ಎಂಬುವವರ ಮನೆಗೆ ತೆರಳಿದ್ದರು.</p>.<p>~ಪಾನಮತ್ತ ದರ್ಶನ್ ಅವರು ವಿದ್ಯಾ ಮನೆಗೆ ಬಂದು ತಮ್ಮನ್ನು ಕರೆದುಕೊಂಡು ರಾಜ ರಾಜೇಶ್ವರಿ ನಗರದಲ್ಲಿರುವ ನಿವಾಸಕ್ಕೆ ಕರೆದೊಯ್ಯುವ ಸಮಯದಲ್ಲಿ ವಾಹನದಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ ಕೊಲೆ ಬೆದರಿಕೆ ಹಾಕಿದರು~ ಎಂದು ವಿಜಯ ಲಕ್ಷ್ಮಿ ದೂರು ದಾಖಲಿಸಿದ್ದಾರೆ ಎಂದು ಪಶ್ಚಿಮ ವಲಯ ಡಿಸಿಪಿ ಸಿದ್ಧರಾಮಪ್ಪ ತಿಳಿಸಿದ್ದಾರೆ.<br /> <br /> ಆದರೆ ದರ್ಶನ್ ಅವರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ‘ತಾವು ವಿದ್ಯಾ ಮನೆಯಲ್ಲಿ ಪತ್ನಿ ಜತೆಯಲ್ಲಿದ್ದ ಮಗುವನ್ನು ವಾಹನದಲ್ಲಿ ತಿರುಗಾಡಿಸಲು ಕರೆದುಕೊಂಡು ಹೋಗಲು ಮುಂದಾದಾಗ ಮಗುವನ್ನು ನನ್ನೊಟ್ಟಿಗೆ ಕಳುಹಿಸಲು ಅವಳು ನಿರಾಕರಿಸಿದಳು. ಕಾರಣ ಅವಳ ಮೇಲೆ ಕೈಯಿಂದ ಹಲ್ಲೆ ಮಾಡಿದೆ. ಮುಂದೇನಾಯಿತು ಗೋತ್ತಿಲ್ಲ, ಆ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದು ನಿಜ’ಎಂದು ಅವರು ತಿಳಿಸಿದ್ದಾರೆ. <br /> <br /> ಈ ಮಧ್ಯೆ ವಿಜಯ ನಗರದ ಗಾಯತ್ರಿ ಆಸ್ಪತ್ರೆಗೆ ದಾಖಲಾಗಿರುವ ವಿಜಯ ಲಕ್ಷ್ಮಿ ಅವರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಅವರು ಭೇಟಿ ಮಾಡಿ ಘಟನೆ ಕುರಿತಂತೆ ಮಾಹಿತಿ ಪಡೆದು, ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.</p>.<p>ನಟ ದರ್ಶನ್ ಅವರು ಕಳೆದ ಒಂದು ವರ್ಷದಿಂದ ತಮಗೆ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿಜಯ ಲಕ್ಷ್ಮಿ ತಿಳಿಸಿದರೆಂದೂ ಮಂಜುಳಾ ತಿಳಿಸಿದ್ದಾರೆ.<br /> <br /> ದರ್ಶನ ಅವರನ್ನು ಬಂಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ದರ್ಶನ್ ಅವರನ್ನು ಬಿಡುಗಡೆ ಮಾಡುವಂತೆ ದಾಂಧಲೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪತ್ನಿ ವಿಜಯಲಕ್ಷ್ಮಿ ಮೇಲೆ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಶುಕ್ರವಾರ ವಿಜಯನಗರ ಪೊಲೀಸರು ಬಂಧಿಸಿದ್ದಾರೆ.<br /> <br /> ವಿಜಯಲಕ್ಷ್ಮಿ ಅವರು ಶುಕ್ರವಾರ ಸಂಜೆ ವಿಜಯನಗರದಲ್ಲಿರುವ ತಮ್ಮ ಗೆಳತಿ ವಿದ್ಯಾ ಎಂಬುವವರ ಮನೆಗೆ ತೆರಳಿದ್ದರು.</p>.<p>~ಪಾನಮತ್ತ ದರ್ಶನ್ ಅವರು ವಿದ್ಯಾ ಮನೆಗೆ ಬಂದು ತಮ್ಮನ್ನು ಕರೆದುಕೊಂಡು ರಾಜ ರಾಜೇಶ್ವರಿ ನಗರದಲ್ಲಿರುವ ನಿವಾಸಕ್ಕೆ ಕರೆದೊಯ್ಯುವ ಸಮಯದಲ್ಲಿ ವಾಹನದಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ ಕೊಲೆ ಬೆದರಿಕೆ ಹಾಕಿದರು~ ಎಂದು ವಿಜಯ ಲಕ್ಷ್ಮಿ ದೂರು ದಾಖಲಿಸಿದ್ದಾರೆ ಎಂದು ಪಶ್ಚಿಮ ವಲಯ ಡಿಸಿಪಿ ಸಿದ್ಧರಾಮಪ್ಪ ತಿಳಿಸಿದ್ದಾರೆ.<br /> <br /> ಆದರೆ ದರ್ಶನ್ ಅವರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ‘ತಾವು ವಿದ್ಯಾ ಮನೆಯಲ್ಲಿ ಪತ್ನಿ ಜತೆಯಲ್ಲಿದ್ದ ಮಗುವನ್ನು ವಾಹನದಲ್ಲಿ ತಿರುಗಾಡಿಸಲು ಕರೆದುಕೊಂಡು ಹೋಗಲು ಮುಂದಾದಾಗ ಮಗುವನ್ನು ನನ್ನೊಟ್ಟಿಗೆ ಕಳುಹಿಸಲು ಅವಳು ನಿರಾಕರಿಸಿದಳು. ಕಾರಣ ಅವಳ ಮೇಲೆ ಕೈಯಿಂದ ಹಲ್ಲೆ ಮಾಡಿದೆ. ಮುಂದೇನಾಯಿತು ಗೋತ್ತಿಲ್ಲ, ಆ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದು ನಿಜ’ಎಂದು ಅವರು ತಿಳಿಸಿದ್ದಾರೆ. <br /> <br /> ಈ ಮಧ್ಯೆ ವಿಜಯ ನಗರದ ಗಾಯತ್ರಿ ಆಸ್ಪತ್ರೆಗೆ ದಾಖಲಾಗಿರುವ ವಿಜಯ ಲಕ್ಷ್ಮಿ ಅವರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಅವರು ಭೇಟಿ ಮಾಡಿ ಘಟನೆ ಕುರಿತಂತೆ ಮಾಹಿತಿ ಪಡೆದು, ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.</p>.<p>ನಟ ದರ್ಶನ್ ಅವರು ಕಳೆದ ಒಂದು ವರ್ಷದಿಂದ ತಮಗೆ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿಜಯ ಲಕ್ಷ್ಮಿ ತಿಳಿಸಿದರೆಂದೂ ಮಂಜುಳಾ ತಿಳಿಸಿದ್ದಾರೆ.<br /> <br /> ದರ್ಶನ ಅವರನ್ನು ಬಂಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ದರ್ಶನ್ ಅವರನ್ನು ಬಿಡುಗಡೆ ಮಾಡುವಂತೆ ದಾಂಧಲೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>