ನಿಬಂಧನೆ: ಕೈಗೊಂಡ ಕಾಮಗಾರಿ ಬಗ್ಗೆ `ಮೂರನೇ ವ್ಯಕ್ತಿ ಪರಿಶೀಲನೆ' ಕಾರ್ಯವನ್ನು ಕಡ್ಡಾಯವಾಗಿ ನಡೆಸಬೇಕು. ಉತ್ತಮ ಗುಣಮಟ್ಟದೊಂದಿಗೆ ಕಾರ್ಯ ನಿರ್ವಹಿಸುವ ಸರ್ಕಾರಿ ನಿರ್ಮಾಣ ಸಂಸ್ಥೆಯಿಂದ ಅಂದಾಜುಪಟ್ಟಿ ಸಿದ್ಧಪಡಿಸಿ, ಜಿಲ್ಲಾಧಿಕಾರಿಯಿಂದ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಬೇಕು.
ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ, ಅನುದಾನವನ್ನು ಕಾಂಕ್ರೀಟ್ ರಸ್ತೆಗಳ ನಿರ್ಮಾಣಕ್ಕೆ ಮಾತ್ರ ವಿನಿಯೋಗಿಸಬೇಕು. ಮೂರು ಅಥವಾ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗಡುವು ವಿಧಿಸಲಾಗಿದೆ. ಉಳಿಕೆಯಾದ ಅನುದಾನ ಇಲಾಖೆಯ ಆಯುಕ್ತರಿಗೆ ವಾಪಸ್ ನೀಡುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು `ಪ್ರಜಾವಾಣಿ'ಗೆ ತಿಳಿಸಿದರು.