<p><strong>ಬೆಂಗಳೂರು:</strong> ಪರಿಸರ ಸಂರಕ್ಷಣೆಗೆ ಗಣನೀಯ ಕೊಡುಗೆ ನೀಡಿದ ಮೂವರು ವ್ಯಕ್ತಿಗಳು ಮತ್ತು ಮೂರು ಸಂಸ್ಥೆಗಳಿಗೆ 2015ನೇ ಸಾಲಿನ ವಿಶ್ವ ಪರಿಸರ ದಿನ ಅಂಗವಾಗಿ ‘ರಾಜ್ಯ ಪರಿಸರ ಪ್ರಶಸ್ತಿ’ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದರು.<br /> <br /> ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ತಲಾ ₨ 1 ಲಕ್ಷ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ಹೇಳಿದರು.<br /> <br /> ಅರಣ್ಯ ಜಮೀನಿನ ಒತ್ತುವರಿಗೆ ಅವಕಾಶ ಇಲ್ಲ. ಆದರೆ, ಸಣ್ಣ ಪ್ರಮಾಣದಲ್ಲಿ ಈಗಾಗಲೇ ಒತ್ತುವರಿ ಮಾಡಿಕೊಂಡವರಿಗೆ ತೊಂದರೆ ಆಗದ ರೀತಿಯಲ್ಲಿ ಒತ್ತುವರಿ ಸಮಸ್ಯೆ ಪರಿಹರಿಸಲಾಗುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆಉತ್ತರಿಸಿದರು.<br /> </p>.<p><strong>ಯಾರಿಗೆ ಪ್ರಶಸ್ತಿ?</strong><br /> <strong>ವ್ಯಕ್ತಿ ವಿಭಾಗ: </strong>ಸಿ. ಲಕ್ಷ್ಮಣ್ (ಬನಶಂಕರಿ, ಬೆಂಗಳೂರು), ಡಾ.ಆರ್. ಪರಿಮಳ (ವೈ.ಎಸ್. ಕಾಲೊನಿ, ಧಾರವಾಡ), ಡಾ.ಎಸ್. ಹರೀಶ ಜೋಷಿ (ಬಿಜೈ, ಮಂಗಳೂರು)</p>.<p><strong>ಸಂಸ್ಥೆ: </strong>ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ರೌಂಡ್ ಟೇಬಲ್ (ಬೆಂಗಳೂರು), ಬಂಟನೂರ ಗ್ರಾಮ ಅರಣ್ಯ ಸಮಿತಿ (ಮುಧೋಳ), ಪರಿಸರ ಅಭಿವೃದ್ಧಿ ಸಮಿತಿ (ದಾಂಡೇಲಿ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಸರ ಸಂರಕ್ಷಣೆಗೆ ಗಣನೀಯ ಕೊಡುಗೆ ನೀಡಿದ ಮೂವರು ವ್ಯಕ್ತಿಗಳು ಮತ್ತು ಮೂರು ಸಂಸ್ಥೆಗಳಿಗೆ 2015ನೇ ಸಾಲಿನ ವಿಶ್ವ ಪರಿಸರ ದಿನ ಅಂಗವಾಗಿ ‘ರಾಜ್ಯ ಪರಿಸರ ಪ್ರಶಸ್ತಿ’ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದರು.<br /> <br /> ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ತಲಾ ₨ 1 ಲಕ್ಷ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ಹೇಳಿದರು.<br /> <br /> ಅರಣ್ಯ ಜಮೀನಿನ ಒತ್ತುವರಿಗೆ ಅವಕಾಶ ಇಲ್ಲ. ಆದರೆ, ಸಣ್ಣ ಪ್ರಮಾಣದಲ್ಲಿ ಈಗಾಗಲೇ ಒತ್ತುವರಿ ಮಾಡಿಕೊಂಡವರಿಗೆ ತೊಂದರೆ ಆಗದ ರೀತಿಯಲ್ಲಿ ಒತ್ತುವರಿ ಸಮಸ್ಯೆ ಪರಿಹರಿಸಲಾಗುತ್ತಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆಉತ್ತರಿಸಿದರು.<br /> </p>.<p><strong>ಯಾರಿಗೆ ಪ್ರಶಸ್ತಿ?</strong><br /> <strong>ವ್ಯಕ್ತಿ ವಿಭಾಗ: </strong>ಸಿ. ಲಕ್ಷ್ಮಣ್ (ಬನಶಂಕರಿ, ಬೆಂಗಳೂರು), ಡಾ.ಆರ್. ಪರಿಮಳ (ವೈ.ಎಸ್. ಕಾಲೊನಿ, ಧಾರವಾಡ), ಡಾ.ಎಸ್. ಹರೀಶ ಜೋಷಿ (ಬಿಜೈ, ಮಂಗಳೂರು)</p>.<p><strong>ಸಂಸ್ಥೆ: </strong>ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ರೌಂಡ್ ಟೇಬಲ್ (ಬೆಂಗಳೂರು), ಬಂಟನೂರ ಗ್ರಾಮ ಅರಣ್ಯ ಸಮಿತಿ (ಮುಧೋಳ), ಪರಿಸರ ಅಭಿವೃದ್ಧಿ ಸಮಿತಿ (ದಾಂಡೇಲಿ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>