<p><strong>ಭಾರತೀಸುತ ವೇದಿಕೆ (ಮಡಿಕೇರಿ): </strong>ಪಿಎಚ್.ಡಿಗೆ ಇಂಗ್ಲಿಷ್ ಕಡ್ಡಾಯ ಮಾಡಿರುವ ಕ್ರಮವನ್ನು ಖಂಡಿಸಿರುವ ವಿಶ್ರಾಂತ ಕುಲಪತಿ ಪ್ರೊ.ದೇ.ಜವರೇಗೌಡ ಅವರು, ಇದರ ವಿರುದ್ಧ ಹೋರಾಟ ನಡೆಸಬೇಕು ಎಂದು ಕನ್ನಡಿಗರಿಗೆ ಕರೆ ನೀಡಿದ್ದಾರೆ.<br /> <br /> ಇಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ಗುರುವಾರ ಕನ್ನಡ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಅವರು, ‘ಪಿಎಚ್.ಡಿಗೆ ಇಂಗ್ಲಿಷ್ ಕಡ್ಡಾಯ ಮಾಡಲು ಯುಜಿಸಿ ಯಾರು?’ ಎಂದು ಪ್ರಶ್ನಿಸಿದರು.<br /> <br /> ಕನ್ನಡದಲ್ಲಿಯೂ ಪಿಎಚ್.ಡಿ ಮಾಡಬಹುದು, ಆದರೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಇಂಗ್ಲಿಷ್ನಲ್ಲಿಯೇ ಪಿಎಚ್. ಡಿ ಮಾಡಬೇಕು ಎಂಬ ನಿಯಮ ರೂಪಿಸಿದ್ದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.<br /> <br /> ರಾಷ್ಟ್ರೀಯ ಬ್ಯಾಂಕ್ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಇಂಗ್ಲಿಷ್ ಭಾಷೆ ಈಗ ಹಳ್ಳಿಹಳ್ಳಿಯನ್ನೂ ತಲುಪಿದೆ. ಕನ್ನಡದಲ್ಲಿ ಓದಿದವರಿಗೆ ಮಾತ್ರ ಕೆಲಸ ನೀಡುತ್ತೇವೆ ಎಂದು ಸರ್ಕಾರ ಹೇಳಬೇಕು. ಈ ಬಗ್ಗೆ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಆಗ್ರಹಪಡಿಸಿದರು.<br /> <br /> ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಟಿ.ಸಿ.ಶಿವಶಂಕರಮೂರ್ತಿ ಮಾತನಾಡಿ ಇಂಗ್ಲಿಷ್ನಲ್ಲಿ ಪಿಎಚ್.ಡಿ ಮಾಡಬೇಕು ಎಂಬುದು ಯುಜಿಸಿ ಮಾರ್ಗಸೂಚಿ. ಆದರೆ ಅದನ್ನು ಬದಲಾಯಿಸಿಕೊಳ್ಳಬಹುದು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿಯೇ ಪಿಎಚ್.ಡಿ ಮಾಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀಸುತ ವೇದಿಕೆ (ಮಡಿಕೇರಿ): </strong>ಪಿಎಚ್.ಡಿಗೆ ಇಂಗ್ಲಿಷ್ ಕಡ್ಡಾಯ ಮಾಡಿರುವ ಕ್ರಮವನ್ನು ಖಂಡಿಸಿರುವ ವಿಶ್ರಾಂತ ಕುಲಪತಿ ಪ್ರೊ.ದೇ.ಜವರೇಗೌಡ ಅವರು, ಇದರ ವಿರುದ್ಧ ಹೋರಾಟ ನಡೆಸಬೇಕು ಎಂದು ಕನ್ನಡಿಗರಿಗೆ ಕರೆ ನೀಡಿದ್ದಾರೆ.<br /> <br /> ಇಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ಗುರುವಾರ ಕನ್ನಡ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಅವರು, ‘ಪಿಎಚ್.ಡಿಗೆ ಇಂಗ್ಲಿಷ್ ಕಡ್ಡಾಯ ಮಾಡಲು ಯುಜಿಸಿ ಯಾರು?’ ಎಂದು ಪ್ರಶ್ನಿಸಿದರು.<br /> <br /> ಕನ್ನಡದಲ್ಲಿಯೂ ಪಿಎಚ್.ಡಿ ಮಾಡಬಹುದು, ಆದರೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಇಂಗ್ಲಿಷ್ನಲ್ಲಿಯೇ ಪಿಎಚ್. ಡಿ ಮಾಡಬೇಕು ಎಂಬ ನಿಯಮ ರೂಪಿಸಿದ್ದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.<br /> <br /> ರಾಷ್ಟ್ರೀಯ ಬ್ಯಾಂಕ್ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಇಂಗ್ಲಿಷ್ ಭಾಷೆ ಈಗ ಹಳ್ಳಿಹಳ್ಳಿಯನ್ನೂ ತಲುಪಿದೆ. ಕನ್ನಡದಲ್ಲಿ ಓದಿದವರಿಗೆ ಮಾತ್ರ ಕೆಲಸ ನೀಡುತ್ತೇವೆ ಎಂದು ಸರ್ಕಾರ ಹೇಳಬೇಕು. ಈ ಬಗ್ಗೆ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಆಗ್ರಹಪಡಿಸಿದರು.<br /> <br /> ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಟಿ.ಸಿ.ಶಿವಶಂಕರಮೂರ್ತಿ ಮಾತನಾಡಿ ಇಂಗ್ಲಿಷ್ನಲ್ಲಿ ಪಿಎಚ್.ಡಿ ಮಾಡಬೇಕು ಎಂಬುದು ಯುಜಿಸಿ ಮಾರ್ಗಸೂಚಿ. ಆದರೆ ಅದನ್ನು ಬದಲಾಯಿಸಿಕೊಳ್ಳಬಹುದು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿಯೇ ಪಿಎಚ್.ಡಿ ಮಾಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>