‘ಮುಂಡೆವಾಡಿ, ತನ್ನ ಸಹಚರನೊಂದಿಗೆ ಬೈಕ್ನಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಮಾಹಿತಿ ಪಡೆದಿದ್ದ ಚಡಚಣ ಪೊಲೀಸರು, ಆತನನ್ನು ಬೆನ್ನಟ್ಟಿ ಅಡ್ಡಗಟ್ಟಿದ್ದಾರೆ. ಈ ವೇಳೆ, ಆತ ಪಿಎಸ್ಐ, ಕಾನ್ಸ್ಟೆಬಲ್ಗೆ ಚಾಕುವಿನಿಂದ ಇರಿದು, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣವೇ ಪಿಎಸ್ಐ, ಮುಂಡೆವಾಡಿಯತ್ತ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ. ನೆಲಕ್ಕುರುಳಿದ ಆತನನ್ನು ಹಾಗೂ ಅವನ ಬಳಿಯಿದ್ದ ಜೀವಂತ ಗುಂಡು ತುಂಬಿದ್ದ ಎರಡು ನಾಡ ಪಿಸ್ತೂಲುಗಳನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರಿ ‘ಪ್ರಜಾವಾಣಿ’ಗೆ ತಿಳಿಸಿದರು.