ಹಿರಿಯ ಚಿಂತಕ ಪ್ರೊ.ಎಂ.ಕರೀಮುದ್ದೀನ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಕೆ.ವಿ.ಶಂಕರಗೌಡ ಬಿ.ಇಡಿ ಕಾಲೇಜು ಪ್ರಾಚಾರ್ಯ ಡಾ.ಚನ್ನಕೃಷ್ಣಯ್ಯ ಅಧ್ಯಕ್ಷತೆ ವಹಿಸುವರು. ಪ್ರಜಾವಾಣಿ ಮೈಸೂರು ಬ್ಯೂರೊ ಮುಖ್ಯಸ್ಥ ಕೆ.ಜೆ.ಮರಿಯಪ್ಪ ಅತಿಥಿಯಾಗಿ ಭಾಗವಹಿಸುವರು. ವಿಜಯ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಸತ್ಯನಾರಾಯಣ ನಾಯಕ, ದಲಿತ ಸಂಘರ್ಷ ಸಮಿತಿ ಸಂಚಾಲಕ ಗುರುಪ್ರಸಾದ್ ಕೆರಗೋಡು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್ ಚಾಮಲಾಪುರ, ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್, ಕವಿ ಕೆ.ಪಿ.ಮೃತ್ಯುಂಜಯ, ಜನವಾದಿ ಮಹಿಳಾ ಸಂಘಟನೆಯ ಸಿ.ಕುಮಾರಿ ಅಭಿಪ್ರಾಯ ಮಂಡಿಸುವರು.