‘ಉಗ್ರ ಹೋರಾಟ ನಡೆಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ನೀಡಿದ್ದರು’ ಎಂದು ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಸಂಸದ, ಯುವ ಮೋರ್ಚಾ ಅಧ್ಯಕ್ಷ ಪ್ರತಾಪ್ಸಿಂಹ, ತಮ್ಮ ಫೇಸ್ಬುಕ್ ವಾಲ್ನಲ್ಲಿ ಹಾಕಿದ್ದ ವಿಡಿಯೊ ವೈರಲ್ ಆಗಿತ್ತು. ಆದರೆ, ‘ಉಗ್ರ ಹೋರಾಟ’ ಪಕ್ಷದ ನೀತಿಯಲ್ಲ ಎಂದ ಬಿಜೆಪಿ ನಾಯಕರು ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ್ದರು.