ಚಿತ್ರದುರ್ಗ: ಪ್ರಧಾನಿ ಮೋದಿ ಒಂದು ದಿನ ರಾಜ್ಯಕ್ಕೆ ಬಂದು ಹೋಗಿರುವುದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ, ಯಾವ ಬದಲಾವಣೆಯೂ ಆಗುವುದಿಲ್ಲ’ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೋದಿ ಹವಾ ಕಾಂಗ್ರೆಸ್ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದರು.
ಚುನಾವಣೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ, ‘ಸೋಲುವಂತಹ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ. ಆದರೆ, ಸಚಿವರಿಗೆ ಟಿಕೆಟ್ ತಪ್ಪುವಂತಹ ಯಾವುದೇ ಪ್ರಸ್ತಾಪ ಇದ್ದಂತಿಲ್ಲ. ಇದಕ್ಕೂ ಮುನ್ನ ಪಕ್ಷ ಸಮೀಕ್ಷೆ ನಡೆಸಿ, ತೀರ್ಮಾನ ಕೈಗೊಳ್ಳುತ್ತದೆ’ ಎಂದರು.
‘ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯವರು, ಪಕ್ಷದ ಕೆಲವು ಮುಖಂಡರು ಸೇರಿದಂತೆ, ಖಾಸಗಿ ವಲಯದಿಂದಲೂ ಸಮೀಕ್ಷೆ ಮಾಡಿಸುವ ಸಾಧ್ಯತೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.