ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಬಂದು ಹೋದ್ರೆ ಕಾಂಗ್ರೆಸ್‌ಗೆ ಏನೂ ಆಗಲ್ಲ: ಸತೀಶ್ ಜಾರಕಿಹೊಳಿ

Last Updated 30 ಅಕ್ಟೋಬರ್ 2017, 10:12 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರಧಾನಿ ಮೋದಿ ಒಂದು ದಿನ ರಾಜ್ಯಕ್ಕೆ ಬಂದು ಹೋಗಿರುವುದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ, ಯಾವ ಬದಲಾವಣೆಯೂ ಆಗುವುದಿಲ್ಲ’ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್  ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೋದಿ ಹವಾ ಕಾಂಗ್ರೆಸ್‌ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದರು.

ಚುನಾವಣೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ, ‘ಸೋಲುವಂತಹ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ. ಆದರೆ, ಸಚಿವರಿಗೆ ಟಿಕೆಟ್ ತಪ್ಪುವಂತಹ ಯಾವುದೇ ಪ್ರಸ್ತಾಪ ಇದ್ದಂತಿಲ್ಲ. ಇದಕ್ಕೂ ಮುನ್ನ ಪಕ್ಷ ಸಮೀಕ್ಷೆ ನಡೆಸಿ, ತೀರ್ಮಾನ ಕೈಗೊಳ್ಳುತ್ತದೆ’ ಎಂದರು.

‘ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತದೆ ಎಂದು ಸಮೀಕ್ಷೆಗಳು ಹೇಳಿವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯವರು, ಪಕ್ಷದ ಕೆಲವು ಮುಖಂಡರು ಸೇರಿದಂತೆ, ಖಾಸಗಿ ವಲಯದಿಂದಲೂ ಸಮೀಕ್ಷೆ ಮಾಡಿಸುವ ಸಾಧ್ಯತೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT