<p><strong>ಚಿಕ್ಕಮಗಳೂರು: </strong>‘ಹಿಂದುತ್ವಕ್ಕೆ ಬಲತುಂಬಲು ರಾಜಕೀಯಶಕ್ತಿಗಳಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಚಿಕ್ಕಮಗಳೂರು, ಶೃಂಗೇರಿ, ವಿಜಯಪುರ, ಬೆಳಗಾವಿ ಉತ್ತರ, ತೆರದಾಳ ಕ್ಷೇತ್ರಗಳ ಪೈಕಿ ಒಂದರಲ್ಲಿ ಕಣಕ್ಕಿಳಿಯುತ್ತೇನೆ’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದರು.</p>.<p>‘ರಾಜಕೀಯಶಕ್ತಿ ಇಲ್ಲದೆ ಸಂಘಟನೆಯ ಹೋರಾಟ ಗಾಳಿಗುದ್ದಾಟವಾಗುತ್ತದೆ. ಹೀಗಾಗಿ. ರಾಜಕೀಯ ಪ್ರವೇಶ ಅನಿವಾರ್ಯವಾಗಿದೆ. ಕ್ಷೇತ್ರ ಆಯ್ಕೆ ನಿಟ್ಟಿನಲ್ಲಿ ಕಾರ್ಯಕರ್ತರು ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಸಮೀಕ್ಷೆ ಅಂಶಗಳನ್ನು ಆಧರಿಸಿ ಕ್ಷೇತ್ರ ನಿರ್ಧರಿಸುತ್ತೇನೆ’ ಎಂದು ಅವರು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಲವು ಬಾರಿ ಮನವಿ ಮಾಡಿದರೂ ಬಿಜೆಪಿ ನಮ್ಮ ಮನವಿಗೆ ಸ್ಪಂದಿಸಿಲ್ಲ. ಶಿವಸೇನೆ ಜತೆ ಕೈಜೋಡಿಸುವ ಕುರಿತು ಎರಡು ಸುತ್ತಿನ ಮಾತುಕತೆ ನಡೆದಿದೆ. ಮುಂಬೈನಲ್ಲಿ ಇದೇ 10ರಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಮೈತ್ರಿ ಕೈಗೂಡದಿದ್ದರೆ, ಪಕ್ಷೇತರವಾಗಿಯದರೂ ಸ್ಪರ್ಧಿಸುವುದು ಖಚಿತ’ ಎಂದು ಪ್ರತಿಕ್ರಿಯಿಸಿದರು.</p>.<p><strong>‘ಜೇವರ್ಗಿ, ಕಲಬುರ್ಗಿಯಲ್ಲಿ ಧರಣಿ’:</strong> ‘ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಸುಳ್ಳು ಕೇಸು ದಾಖಲಿಸಲಾಗಿದೆ. ರಾಜ್ಯ ಸರ್ಕಾರವು ಹಿಂದೂಗಳ ದಮನ ನೀತಿ ಅನುಸರಿಸುತ್ತಿದೆ’ ಎಂದು ಮುತಾಲಿಕ್ ಆರೋಪಿಸಿದರು.</p>.<p>ಸ್ವಾಮೀಜಿ ಮತ್ತು 40 ಮಂದಿಯನ್ನು ಬಂಧಿಸಿರುವುದನ್ನು ಖಂಡಿಸಿ ಗುರುವಾರ ಜೇವರ್ಗಿ ಮತ್ತು ಕಲಬುರ್ಗಿಯಲ್ಲಿ ಧರಣಿ ಮಾಡುತ್ತೇವೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ಹಿಂದುತ್ವಕ್ಕೆ ಬಲತುಂಬಲು ರಾಜಕೀಯಶಕ್ತಿಗಳಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಚಿಕ್ಕಮಗಳೂರು, ಶೃಂಗೇರಿ, ವಿಜಯಪುರ, ಬೆಳಗಾವಿ ಉತ್ತರ, ತೆರದಾಳ ಕ್ಷೇತ್ರಗಳ ಪೈಕಿ ಒಂದರಲ್ಲಿ ಕಣಕ್ಕಿಳಿಯುತ್ತೇನೆ’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದರು.</p>.<p>‘ರಾಜಕೀಯಶಕ್ತಿ ಇಲ್ಲದೆ ಸಂಘಟನೆಯ ಹೋರಾಟ ಗಾಳಿಗುದ್ದಾಟವಾಗುತ್ತದೆ. ಹೀಗಾಗಿ. ರಾಜಕೀಯ ಪ್ರವೇಶ ಅನಿವಾರ್ಯವಾಗಿದೆ. ಕ್ಷೇತ್ರ ಆಯ್ಕೆ ನಿಟ್ಟಿನಲ್ಲಿ ಕಾರ್ಯಕರ್ತರು ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಸಮೀಕ್ಷೆ ಅಂಶಗಳನ್ನು ಆಧರಿಸಿ ಕ್ಷೇತ್ರ ನಿರ್ಧರಿಸುತ್ತೇನೆ’ ಎಂದು ಅವರು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಲವು ಬಾರಿ ಮನವಿ ಮಾಡಿದರೂ ಬಿಜೆಪಿ ನಮ್ಮ ಮನವಿಗೆ ಸ್ಪಂದಿಸಿಲ್ಲ. ಶಿವಸೇನೆ ಜತೆ ಕೈಜೋಡಿಸುವ ಕುರಿತು ಎರಡು ಸುತ್ತಿನ ಮಾತುಕತೆ ನಡೆದಿದೆ. ಮುಂಬೈನಲ್ಲಿ ಇದೇ 10ರಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಮೈತ್ರಿ ಕೈಗೂಡದಿದ್ದರೆ, ಪಕ್ಷೇತರವಾಗಿಯದರೂ ಸ್ಪರ್ಧಿಸುವುದು ಖಚಿತ’ ಎಂದು ಪ್ರತಿಕ್ರಿಯಿಸಿದರು.</p>.<p><strong>‘ಜೇವರ್ಗಿ, ಕಲಬುರ್ಗಿಯಲ್ಲಿ ಧರಣಿ’:</strong> ‘ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಸುಳ್ಳು ಕೇಸು ದಾಖಲಿಸಲಾಗಿದೆ. ರಾಜ್ಯ ಸರ್ಕಾರವು ಹಿಂದೂಗಳ ದಮನ ನೀತಿ ಅನುಸರಿಸುತ್ತಿದೆ’ ಎಂದು ಮುತಾಲಿಕ್ ಆರೋಪಿಸಿದರು.</p>.<p>ಸ್ವಾಮೀಜಿ ಮತ್ತು 40 ಮಂದಿಯನ್ನು ಬಂಧಿಸಿರುವುದನ್ನು ಖಂಡಿಸಿ ಗುರುವಾರ ಜೇವರ್ಗಿ ಮತ್ತು ಕಲಬುರ್ಗಿಯಲ್ಲಿ ಧರಣಿ ಮಾಡುತ್ತೇವೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>