ಚಿಕ್ಕಮಗಳೂರು: ‘ಹಿಂದುತ್ವಕ್ಕೆ ಬಲತುಂಬಲು ರಾಜಕೀಯಶಕ್ತಿಗಳಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಚಿಕ್ಕಮಗಳೂರು, ಶೃಂಗೇರಿ, ವಿಜಯಪುರ, ಬೆಳಗಾವಿ ಉತ್ತರ, ತೆರದಾಳ ಕ್ಷೇತ್ರಗಳ ಪೈಕಿ ಒಂದರಲ್ಲಿ ಕಣಕ್ಕಿಳಿಯುತ್ತೇನೆ’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದರು.