‘ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಆವರಣದಲ್ಲಿ ರಾಡಾರ್ ಸ್ಥಾಪನೆ ಪೂರ್ಣಗೊಂಡಿದೆ. ಆದರೆ, ಅದರ ತಾಂತ್ರಿಕ ಕ್ಯಾಲಿಬ್ರೇಷನ್ ಕಾರ್ಯ ಪ್ರಗತಿಯಲ್ಲಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಈ ಕೆಲಸ ಪೂರ್ಣಗೊಳ್ಳಲಿದೆ. ಬಳಿಕ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೋಡ ಬಿತ್ತನೆ ವಿಮಾನ ಹಾರಾಟ ಆರಂಭಿಸಲಿದೆ’ ಎಂದು ಯೋಜನೆಯ ಸಂಯೋಜಕರೂ ಆಗಿರುವ ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನಿಯರ್ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.