<p><strong>ಬೆಂಗಳೂರು: </strong>ಹಿರಿಯ ಶಿಕ್ಷಣ ತಜ್ಞ ಪ್ರೊ.ಎಸ್.ಆರ್.ರೋಹಿಡೇಕರ್ (98) ಭಾನುವಾರ ಇಲ್ಲಿ ನಿಧನರಾದರು.<br /> <br /> ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಅಂತ್ಯಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ನಡೆಯಿತು.<br /> <br /> ಮೂಲತಃ ವಿಜಾಪುರ ಜಿಲ್ಲೆಯವರಾದ ಅವರು ಹಲವು ವರ್ಷಗಳಿಂದ ನಗರದಲ್ಲಿಯೇ ವಾಸ ಮಾಡುತ್ತಿದ್ದರು. ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತಂದಿದ್ದರು.<br /> <br /> ಅಧ್ಯಾಪಕರಿಗೆ ಚೆಕ್ ಮೂಲಕ ವೇತನ ವಿತರಣೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ನೀಡಿದ್ದ ಕೊಡುಗೆಗಾಗಿ ರೋಹಿಡೇಕರ್ ಅವರಿಗೆ 1992ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು.<br /> <br /> ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅದಮ್ಯ ಆಸಕ್ತಿ ಹೊಂದಿದ್ದ ಅವರು ಹಲವಾರು ಕೃತಿಗಳನ್ನು ಹೊರ ತಂದಿದ್ದಾರೆ. ಷೇಕ್ಸ್ಪಿಯರ್ ಸಾನೆಟ್ಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಮಾರ್ಗದರ್ಶನದಲ್ಲಿಯೇ 7 ಮಂದಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ರಾಜಾಜಿನಗರ ವಿದ್ಯಾವರ್ಧಕ ಸಂಘ, ವಿಜಯ ಎಜುಕೇಷನ್ ಸೊಸೈಟಿಯಲ್ಲಿಯೂ ಸಕ್ರಿಯರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಿರಿಯ ಶಿಕ್ಷಣ ತಜ್ಞ ಪ್ರೊ.ಎಸ್.ಆರ್.ರೋಹಿಡೇಕರ್ (98) ಭಾನುವಾರ ಇಲ್ಲಿ ನಿಧನರಾದರು.<br /> <br /> ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಅಂತ್ಯಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ನಡೆಯಿತು.<br /> <br /> ಮೂಲತಃ ವಿಜಾಪುರ ಜಿಲ್ಲೆಯವರಾದ ಅವರು ಹಲವು ವರ್ಷಗಳಿಂದ ನಗರದಲ್ಲಿಯೇ ವಾಸ ಮಾಡುತ್ತಿದ್ದರು. ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತಂದಿದ್ದರು.<br /> <br /> ಅಧ್ಯಾಪಕರಿಗೆ ಚೆಕ್ ಮೂಲಕ ವೇತನ ವಿತರಣೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ನೀಡಿದ್ದ ಕೊಡುಗೆಗಾಗಿ ರೋಹಿಡೇಕರ್ ಅವರಿಗೆ 1992ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು.<br /> <br /> ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅದಮ್ಯ ಆಸಕ್ತಿ ಹೊಂದಿದ್ದ ಅವರು ಹಲವಾರು ಕೃತಿಗಳನ್ನು ಹೊರ ತಂದಿದ್ದಾರೆ. ಷೇಕ್ಸ್ಪಿಯರ್ ಸಾನೆಟ್ಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಮಾರ್ಗದರ್ಶನದಲ್ಲಿಯೇ 7 ಮಂದಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ರಾಜಾಜಿನಗರ ವಿದ್ಯಾವರ್ಧಕ ಸಂಘ, ವಿಜಯ ಎಜುಕೇಷನ್ ಸೊಸೈಟಿಯಲ್ಲಿಯೂ ಸಕ್ರಿಯರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>