ವಿಜಾಪುರ: `ಸಿಂದಗಿ ಮಿನಿ ವಿಧಾನಸೌಧದ ಆವರಣದಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳು ಶ್ರೀರಾಮ ಸೇನೆಯ ಕಾರ್ಯಕರ್ತರು ಎಂಬುದನ್ನು ದೃಢೀಕರಿಸುವ ದಾಖಲೆಗಳು ನಮ್ಮ ಬಳಿ ಇವೆ` ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಡಿ.ಸಿ. ರಾಜಪ್ಪ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ತಮ್ಮವರಲ್ಲ, ತಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ ಮುತಾಲಿಕ ಮಾಡಿದ ಆರೋಪಗಳ ಕುರಿತು ಪ್ರಶ್ನಿಸಿದಾಗ ರಾಜಪ್ಪ ಮಾಹಿತಿ ನೀಡಿದರು.