<p><strong>ಬೆಂಗಳೂರು:</strong> ಬಜೆಟ್ ಅಧಿವೇಶನ ನಂತರ ಏಪ್ರಿಲ್ ಮೊದಲ ವಾರದಲ್ಲಿ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ.</p>.<p>ಕಳೆದ ತಿಂಗಳು ಇನ್ನೇನು ಸಂಪುಟ ವಿಸ್ತರಣೆ ಮಾಡಬೇಕು ಎನ್ನುವಷ್ಟರಲ್ಲೇ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಯಿತು. ಅದರ ನಂತರ ಬಜೆಟ್ ಅಧಿವೇಶನ. ಹೀಗಾಗಿ ಈ ಪ್ರಕ್ರಿಯೆ ಸ್ವಲ್ಪ ಮುಂದಕ್ಕೆ ಹೋಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಈ ಕುರಿತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಪಕ್ಷದ ವರಿಷ್ಠರ ಜತೆಗೂ ಚರ್ಚೆ ನಡೆಸಿದ್ದು, ಅವರು ಅದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>ಒಟ್ಟು 20 ಇಲಾಖೆಗಳ ಹೊರೆ ಇದ್ದು, ಅವುಗಳನ್ನು ಒಬ್ಬರೇ ನಿಭಾಯಿಸುವುದು ಕಷ್ಟ. ಹೀಗಾಗಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಬೇಕು ಎಂಬ ತಮ್ಮ ತೀರ್ಮಾನದ ಬಗ್ಗೆ ವರಿಷ್ಠರ ಜತೆ ಸದಾನಂದಗೌಡ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಅಧಿವೇಶನ ನಂತರ ಸಂಭಾವ್ಯ ಸಚಿವರ ಪಟ್ಟಿ ಸಿದ್ಧಪಡಿಸುವ ಸಿ.ಎಂ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಅದಕ್ಕೂ ಮುನ್ನವೇ ಪ್ರಮುಖರ ಸಭೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಆಹ್ವಾನಿಸಲಿದ್ದಾರೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಜೆಟ್ ಅಧಿವೇಶನ ನಂತರ ಏಪ್ರಿಲ್ ಮೊದಲ ವಾರದಲ್ಲಿ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ.</p>.<p>ಕಳೆದ ತಿಂಗಳು ಇನ್ನೇನು ಸಂಪುಟ ವಿಸ್ತರಣೆ ಮಾಡಬೇಕು ಎನ್ನುವಷ್ಟರಲ್ಲೇ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಯಿತು. ಅದರ ನಂತರ ಬಜೆಟ್ ಅಧಿವೇಶನ. ಹೀಗಾಗಿ ಈ ಪ್ರಕ್ರಿಯೆ ಸ್ವಲ್ಪ ಮುಂದಕ್ಕೆ ಹೋಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಈ ಕುರಿತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಪಕ್ಷದ ವರಿಷ್ಠರ ಜತೆಗೂ ಚರ್ಚೆ ನಡೆಸಿದ್ದು, ಅವರು ಅದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.</p>.<p>ಒಟ್ಟು 20 ಇಲಾಖೆಗಳ ಹೊರೆ ಇದ್ದು, ಅವುಗಳನ್ನು ಒಬ್ಬರೇ ನಿಭಾಯಿಸುವುದು ಕಷ್ಟ. ಹೀಗಾಗಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಬೇಕು ಎಂಬ ತಮ್ಮ ತೀರ್ಮಾನದ ಬಗ್ಗೆ ವರಿಷ್ಠರ ಜತೆ ಸದಾನಂದಗೌಡ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಅಧಿವೇಶನ ನಂತರ ಸಂಭಾವ್ಯ ಸಚಿವರ ಪಟ್ಟಿ ಸಿದ್ಧಪಡಿಸುವ ಸಿ.ಎಂ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಅದಕ್ಕೂ ಮುನ್ನವೇ ಪ್ರಮುಖರ ಸಭೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಆಹ್ವಾನಿಸಲಿದ್ದಾರೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>