ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ನೌಕರರು, ಬಡ್ತಿ ಮೀಸಲಾತಿ ರದ್ದಾಗಿದ್ದರಿಂದಾಗಿ ಹಿಂಬಡ್ತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಪರಿಷ್ಕೃತ ಬಡ್ತಿ ಮೀಸಲಾತಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಅದನ್ನು ಅನುಷ್ಠಾನ ಮಾಡುವ ಮೂಲಕ ನ್ಯಾಯ ಕೊಡಿಸುವ ಅವಕಾಶ ಇದೆ. ಸರ್ಕಾರದಲ್ಲಿ ಸಚಿವರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರು ಒತ್ತಡ ಹಾಕಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.