<p><strong>ಹರಪನಹಳ್ಳಿ (ದಾವಣಗೆರೆ ಜಿಲ್ಲೆ):</strong> ಬಯಲು ಶೌಚಾಲಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಗುಂಪೊಂದರಿಂದ ವಿವಸ್ತ್ರಗೊಂಡು ಹಲ್ಲೆಗೆ ಗುರಿಯಾಗಿದ್ದ ವಿಮಲಮ್ಮ (38) (ಹೆಸರು ಬದಲಾಯಿಸಲಾಗಿದೆ) ಅವರಿಗೆ ಗುರುವಾರ ರಾಗಿಮಸಲವಾಡ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ಮುಂದೆ ಅಳಲು ತೋಡಿಕೊಳ್ಳಲು ಅವಕಾಶವೇ ದೊರೆಯಲಿಲ್ಲ!</p>.<p>ಜುಲೈ 18ರಂದು ಪ್ರಕಟವಾಗಿದ್ದ `ಪ್ರಜಾವಾಣಿ~ ವರದಿ ಆಧರಿಸಿ ಗುರುವಾರ ಹರಪನಹಳ್ಳಿ ತಾಲ್ಲೂಕು ರಾಗಿಮಸಲವಾಡ ಗ್ರಾಮಕ್ಕೆ ಡಿವೈಎಸ್ಪಿ ಎಚ್.ಆರ್. ರಾಧಾಮಣಿ, ಉಪ ವಿಭಾಗಾಧಿಕಾರಿ ಇಬ್ರಾಹಿಂ ಮೈಗೂರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಟಿ. ಪಾಂಡ್ಯಪ್ಪ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿತ್ತು.</p>.<p>ಅಧಿಕಾರಿಗಳ ತಂಡದ ಎದುರು ವಿಮಲಮ್ಮ `ಗ್ರಾಮದ ಬಯಲು ಶೌಚಾಲಯ ಪ್ರಕರಣದಲ್ಲಿ ಜಮೀನು ಅಕ್ರಮಣ ಪ್ರಶ್ನಿಸಿದ್ದಕ್ಕೆ ಮುಖಂಡರೊಬ್ಬರ ಕುಮ್ಮಕ್ಕಿನಿಂದ ಸ್ಥಳೀಯ ಗುಂಪೊಂದು ನನ್ನನ್ನು ಬೆತ್ತಲುಗೊಳಿಸಿ ಅಮಾನುಷವಾಗಿ ಮನಬಂದಂತೆ ಥಳಿಸಿದೆ. ನನಗೆ ನ್ಯಾಯ ದೊರಕಿಸಿಕೊಡಿ~ ಎಂದು ತಮ್ಮ ನೋವು ಬಿಚ್ಚಿಡುತ್ತಿದ್ದಂತೆಯೇ, `ಈಗ ಶೌಚಾಲಯಕ್ಕೆ ಸಂಬಂಧಿಸಿದಂತೆ ಮಾತ್ರ ಮಾತನಾಡಿ~ ಎಂದು ಅಧಿಕಾರಿಗಳು ಆ ಮಹಿಳೆಯ ಬಾಯಿ ಮುಚ್ಚಿಸಿದರು.</p>.<p>`ಆವತ್ತು ಕೂಡಾ ಪೊಲೀಸರು ನನ್ನ ನೋವಿಗೆ ಸ್ಪಂದಿಸಲಿಲ್ಲ. ಇವತ್ತಾದರೂ ನನಗೆ ನ್ಯಾಯ ಕೊಡಿಸ್ತಾರೆ ಅಂದುಕೊಂಡಿದ್ದೆ. ಆದರೆ, ಅವರು ನನ್ನ ಮಾತನ್ನೇ ಕೇಳಲಿಲ್ಲ~ ಎಂದು ವಿಮಲಮ್ಮ ಕಣ್ಣೀರಿಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಹಲವಾಗಿಲು ಪೊಲೀಸ್ ಠಾಣೆಯಲ್ಲಿ ಐಪಿಸಿ 354, 323, 143 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ ಎಂದು ವಿಮಲಮ್ಮ ಅವರ ಪತಿ ತಿಳಿಸಿದರು.</p>.<p>ಗ್ರಾಮಸ್ಥರೊಂದಿಗೆ ಮಾತನಾಡುವ ಮುನ್ನವೇ ಅಧಿಕಾರಿಗಳ ತಂಡ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಭೆ ನಡೆಸಿತು. ನಂತರ ಗ್ರಾಮಸ್ಥರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ, ಶೌಚಾಲಯ ಸೌಲಭ್ಯ ಕೊರತೆಯಿಂದ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಅಹವಾಲು ಆಲಿಸಿತು. ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಭರವಸೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕುಬೇಂದ್ರಪ್ಪ, ಸಂಪೂರ್ಣ ಸ್ವಚ್ಛತಾ ಆಂದೋಲನದ ನೋಡಲ್ ಅಧಿಕಾರಿ ಬಸವರಾಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಾಸುದೇವ್, ಜಿಲ್ಲಾ ನೆರವು ಘಟಕದ ಸಂಯೋಜಕಿ ಜಿ. ರೂಪಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ದಾವಣಗೆರೆ ಜಿಲ್ಲೆ):</strong> ಬಯಲು ಶೌಚಾಲಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಗುಂಪೊಂದರಿಂದ ವಿವಸ್ತ್ರಗೊಂಡು ಹಲ್ಲೆಗೆ ಗುರಿಯಾಗಿದ್ದ ವಿಮಲಮ್ಮ (38) (ಹೆಸರು ಬದಲಾಯಿಸಲಾಗಿದೆ) ಅವರಿಗೆ ಗುರುವಾರ ರಾಗಿಮಸಲವಾಡ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ಮುಂದೆ ಅಳಲು ತೋಡಿಕೊಳ್ಳಲು ಅವಕಾಶವೇ ದೊರೆಯಲಿಲ್ಲ!</p>.<p>ಜುಲೈ 18ರಂದು ಪ್ರಕಟವಾಗಿದ್ದ `ಪ್ರಜಾವಾಣಿ~ ವರದಿ ಆಧರಿಸಿ ಗುರುವಾರ ಹರಪನಹಳ್ಳಿ ತಾಲ್ಲೂಕು ರಾಗಿಮಸಲವಾಡ ಗ್ರಾಮಕ್ಕೆ ಡಿವೈಎಸ್ಪಿ ಎಚ್.ಆರ್. ರಾಧಾಮಣಿ, ಉಪ ವಿಭಾಗಾಧಿಕಾರಿ ಇಬ್ರಾಹಿಂ ಮೈಗೂರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಟಿ. ಪಾಂಡ್ಯಪ್ಪ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿತ್ತು.</p>.<p>ಅಧಿಕಾರಿಗಳ ತಂಡದ ಎದುರು ವಿಮಲಮ್ಮ `ಗ್ರಾಮದ ಬಯಲು ಶೌಚಾಲಯ ಪ್ರಕರಣದಲ್ಲಿ ಜಮೀನು ಅಕ್ರಮಣ ಪ್ರಶ್ನಿಸಿದ್ದಕ್ಕೆ ಮುಖಂಡರೊಬ್ಬರ ಕುಮ್ಮಕ್ಕಿನಿಂದ ಸ್ಥಳೀಯ ಗುಂಪೊಂದು ನನ್ನನ್ನು ಬೆತ್ತಲುಗೊಳಿಸಿ ಅಮಾನುಷವಾಗಿ ಮನಬಂದಂತೆ ಥಳಿಸಿದೆ. ನನಗೆ ನ್ಯಾಯ ದೊರಕಿಸಿಕೊಡಿ~ ಎಂದು ತಮ್ಮ ನೋವು ಬಿಚ್ಚಿಡುತ್ತಿದ್ದಂತೆಯೇ, `ಈಗ ಶೌಚಾಲಯಕ್ಕೆ ಸಂಬಂಧಿಸಿದಂತೆ ಮಾತ್ರ ಮಾತನಾಡಿ~ ಎಂದು ಅಧಿಕಾರಿಗಳು ಆ ಮಹಿಳೆಯ ಬಾಯಿ ಮುಚ್ಚಿಸಿದರು.</p>.<p>`ಆವತ್ತು ಕೂಡಾ ಪೊಲೀಸರು ನನ್ನ ನೋವಿಗೆ ಸ್ಪಂದಿಸಲಿಲ್ಲ. ಇವತ್ತಾದರೂ ನನಗೆ ನ್ಯಾಯ ಕೊಡಿಸ್ತಾರೆ ಅಂದುಕೊಂಡಿದ್ದೆ. ಆದರೆ, ಅವರು ನನ್ನ ಮಾತನ್ನೇ ಕೇಳಲಿಲ್ಲ~ ಎಂದು ವಿಮಲಮ್ಮ ಕಣ್ಣೀರಿಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಹಲವಾಗಿಲು ಪೊಲೀಸ್ ಠಾಣೆಯಲ್ಲಿ ಐಪಿಸಿ 354, 323, 143 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ ಎಂದು ವಿಮಲಮ್ಮ ಅವರ ಪತಿ ತಿಳಿಸಿದರು.</p>.<p>ಗ್ರಾಮಸ್ಥರೊಂದಿಗೆ ಮಾತನಾಡುವ ಮುನ್ನವೇ ಅಧಿಕಾರಿಗಳ ತಂಡ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಭೆ ನಡೆಸಿತು. ನಂತರ ಗ್ರಾಮಸ್ಥರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ, ಶೌಚಾಲಯ ಸೌಲಭ್ಯ ಕೊರತೆಯಿಂದ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಅಹವಾಲು ಆಲಿಸಿತು. ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಭರವಸೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕುಬೇಂದ್ರಪ್ಪ, ಸಂಪೂರ್ಣ ಸ್ವಚ್ಛತಾ ಆಂದೋಲನದ ನೋಡಲ್ ಅಧಿಕಾರಿ ಬಸವರಾಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಾಸುದೇವ್, ಜಿಲ್ಲಾ ನೆರವು ಘಟಕದ ಸಂಯೋಜಕಿ ಜಿ. ರೂಪಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>