ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನದಿಂದ ನೀಡಲಾಗುವ ಸಾಹಿತ್ಯ ಪ್ರಶಸ್ತಿಗೆ ಎಂ. ಅಬ್ದುಲ್ ರೆಹಮಾನ್ ಪಾಷ ಅವರ ‘ನಂಬಿಕೆ, ಮೂಢನಂಬಿಕೆ, ವೈಜ್ಞಾನಿಕ ಮನೋವೃತ್ತಿ’ (ವೈಚಾರಿಕ) ಹಾಗೂ ಶ್ರೀಧರ್ ಬಳಗಾರ ಅವರ ‘ಆಡುಕಳ’ (ಕಾದಂಬರಿ) ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಸಾಹಿತಿ ಬೋಳುವಾರು ಮಹಮದ್ ಕುಂಞ ಅವರು ಡಿ. 26ರಂದು ಸಂಜೆ 5.30ಕ್ಕೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ. ಕಮಲಾ ಹಂಪನಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.