<p><strong>ಬಳ್ಳಾರಿ:</strong> ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಶರಣಾಗಿರುವ ಪ್ರಮುಖ ಆರೋಪಿ, ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರ ಆಪ್ತ ಮೆಹಫೂಜ್ಅಲಿ ಖಾನ್ ಅವರನ್ನು ಮಂಗಳವಾರ ರಾತ್ರಿ ವಿಚಾರಣೆಗಾಗಿ ನಗರಕ್ಕೆ ಕರೆತರಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ವಿಚಾರಣೆಗಾಗಿ ಹೈದರಾಬಾದ್ನ ಚಂಚಲಗುಡ ಕಾರಾಗೃಹದಲ್ಲಿದ್ದ ಜಿ.ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿಗೆ ಕರೆತಂದ ಸಂದರ್ಭ ಖಾನ್ ಸಿಬಿಐ ಎದುರು ಶರಣಾಗಿದ್ದ.</p>.<p>ಜಿಲ್ಲೆಯ ಸಂಡೂರು ತಾಲ್ಲೂಕಿನ ರಾಮಗಡ ಅರಣ್ಯ ಪ್ರದೇಶ ಹಾಗೂ ಸುಲ್ತಾನ್ಪುರ ಬಳಿಯ ಸ್ಟಾಕ್ ಯಾರ್ಡ್ಗಳಿಗೆ ಬುಧವಾರ ಬೆಳಿಗ್ಗೆ ಅಲಿಖಾನ್ನನ್ನು ಕರೆದೊಯ್ದು ಅಗತ್ಯ ಮಾಹಿತಿ ಕಲೆ ಹಾಕುವ ಸಾಧ್ಯತೆ ಇದೆ.</p>.<p><strong>ಬಿಗಿ ಬಂದೋಬಸ್ತ್:</strong> ಸಿಬಿಐ ಸಿಬ್ಬಂದಿಯು ಖಾನ್ ಅವರನ್ನು ನಗರಕ್ಕೆ ಕರೆತಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಶೇಖರ ಕ್ಯಾತನ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಶರಣಾಗಿರುವ ಪ್ರಮುಖ ಆರೋಪಿ, ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರ ಆಪ್ತ ಮೆಹಫೂಜ್ಅಲಿ ಖಾನ್ ಅವರನ್ನು ಮಂಗಳವಾರ ರಾತ್ರಿ ವಿಚಾರಣೆಗಾಗಿ ನಗರಕ್ಕೆ ಕರೆತರಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಮೂಲಕ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ವಿಚಾರಣೆಗಾಗಿ ಹೈದರಾಬಾದ್ನ ಚಂಚಲಗುಡ ಕಾರಾಗೃಹದಲ್ಲಿದ್ದ ಜಿ.ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿಗೆ ಕರೆತಂದ ಸಂದರ್ಭ ಖಾನ್ ಸಿಬಿಐ ಎದುರು ಶರಣಾಗಿದ್ದ.</p>.<p>ಜಿಲ್ಲೆಯ ಸಂಡೂರು ತಾಲ್ಲೂಕಿನ ರಾಮಗಡ ಅರಣ್ಯ ಪ್ರದೇಶ ಹಾಗೂ ಸುಲ್ತಾನ್ಪುರ ಬಳಿಯ ಸ್ಟಾಕ್ ಯಾರ್ಡ್ಗಳಿಗೆ ಬುಧವಾರ ಬೆಳಿಗ್ಗೆ ಅಲಿಖಾನ್ನನ್ನು ಕರೆದೊಯ್ದು ಅಗತ್ಯ ಮಾಹಿತಿ ಕಲೆ ಹಾಕುವ ಸಾಧ್ಯತೆ ಇದೆ.</p>.<p><strong>ಬಿಗಿ ಬಂದೋಬಸ್ತ್:</strong> ಸಿಬಿಐ ಸಿಬ್ಬಂದಿಯು ಖಾನ್ ಅವರನ್ನು ನಗರಕ್ಕೆ ಕರೆತಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಶೇಖರ ಕ್ಯಾತನ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>