<p><strong>ಬೆಂಗಳೂರು</strong>: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ವಾಯವ್ಯ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಒಂದೆರಡು ದಿನಗಳಲ್ಲಿ ಏರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಟಿಸಿಯ ಪ್ರಯಾಣ ದರವನ್ನು ಈಗಾಗಲೇ ಶೇ 15ರಷ್ಟು ಏರಿಸಲಾಗಿದೆ. ಕೆಎಸ್ಆರ್ಟಿಸಿ ಮತ್ತು ಇತರ ಎರಡು ಸಂಸ್ಥೆಗಳು ಶೇ 15ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಶೇ 7– 8 ರಷ್ಟು ಏರಿಕೆ ಆಗಲಿದೆ’ ಎಂದು ಮಾಹಿತಿ ನೀಡಿದರು.<br /> <br /> ‘ಡೀಸೆಲ್ ದರದಲ್ಲಿ ಹೆಚ್ಚಳ ಹಾಗೂ ಸಿಬ್ಬಂದಿಯ ವೇತನ ಪ್ರಮಾಣದ ಹೆಚ್ಚಳ ಕಾರಣದಿಂದ ದರ ಏರಿಕೆ ಅನಿವಾರ್ಯ’ ಎಂದು ಸಮರ್ಥಿಸಿಕೊಂಡರು.<br /> <br /> <strong>207 ಕೋಟಿ ಹೊರೆ: </strong>ಕೆಎಸ್ಆರ್ಟಿಸಿಗೆ 2013–14ನೇ ಸಾಲಿನಲ್ಲಿ ಡೀಸೆಲ್ ದರ ಏರಿಕೆಯಿಂದ ₨105 ಕೋಟಿ ಹಾಗೂ ತುಟ್ಟಿಭತ್ಯೆ ಪಾವತಿಯಿಂದ ₨102 ಕೋಟಿ ಹೆಚ್ಚುವರಿ ಹೊರೆ ಬಿದ್ದಿದೆ. ಮಾರ್ಚ್ ಅಂತ್ಯದ ವರೆಗೆ ಸುಮಾರು ₨80 ಕೋಟಿ ನಷ್ಟ ಅನುಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ವಾಯವ್ಯ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಒಂದೆರಡು ದಿನಗಳಲ್ಲಿ ಏರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಟಿಸಿಯ ಪ್ರಯಾಣ ದರವನ್ನು ಈಗಾಗಲೇ ಶೇ 15ರಷ್ಟು ಏರಿಸಲಾಗಿದೆ. ಕೆಎಸ್ಆರ್ಟಿಸಿ ಮತ್ತು ಇತರ ಎರಡು ಸಂಸ್ಥೆಗಳು ಶೇ 15ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಶೇ 7– 8 ರಷ್ಟು ಏರಿಕೆ ಆಗಲಿದೆ’ ಎಂದು ಮಾಹಿತಿ ನೀಡಿದರು.<br /> <br /> ‘ಡೀಸೆಲ್ ದರದಲ್ಲಿ ಹೆಚ್ಚಳ ಹಾಗೂ ಸಿಬ್ಬಂದಿಯ ವೇತನ ಪ್ರಮಾಣದ ಹೆಚ್ಚಳ ಕಾರಣದಿಂದ ದರ ಏರಿಕೆ ಅನಿವಾರ್ಯ’ ಎಂದು ಸಮರ್ಥಿಸಿಕೊಂಡರು.<br /> <br /> <strong>207 ಕೋಟಿ ಹೊರೆ: </strong>ಕೆಎಸ್ಆರ್ಟಿಸಿಗೆ 2013–14ನೇ ಸಾಲಿನಲ್ಲಿ ಡೀಸೆಲ್ ದರ ಏರಿಕೆಯಿಂದ ₨105 ಕೋಟಿ ಹಾಗೂ ತುಟ್ಟಿಭತ್ಯೆ ಪಾವತಿಯಿಂದ ₨102 ಕೋಟಿ ಹೆಚ್ಚುವರಿ ಹೊರೆ ಬಿದ್ದಿದೆ. ಮಾರ್ಚ್ ಅಂತ್ಯದ ವರೆಗೆ ಸುಮಾರು ₨80 ಕೋಟಿ ನಷ್ಟ ಅನುಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>