ಯಾತ್ರೆಯ ಅಂಗವಾಗಿ ಶಿಕಾರಿಪುರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗುವುದು' ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.ಜನವರಿ 1ರಿಂದ 3ರವರೆಗೆ ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ಜ. 6ರಂದು ದಾವಣಗೆರೆಯಲ್ಲಿ ಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದರು.
ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ಕಲಂಗೆ ಸಂಸತ್ತಿನ ಈ ಅಧಿವೇಶನದಲ್ಲಿ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ಇದೇ 27 ಮತ್ತು 28ರಂದು ಗುಲ್ಬರ್ಗದಲ್ಲಿ ಉಪವಾಸ ನಡೆಸುವುದಾಗಿ ಅವರು ಪ್ರಕಟಿಸಿದರು.