ನವದೆಹಲಿ: ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಮುಖ್ಯಮಂತ್ರಿ ಪದವಿಯನ್ನು ಕಳೆದುಕೊಂಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ ~ಗಣಿಕಪ್ಪ~ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐ ತನಿಖೆಗೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ತ್ರಿಸದಸ್ಯ ಅರಣ್ಯ ಪೀಠ ಬಿಎಸ್ ವೈ ಅವರ ಪ್ರಕರಣದ ವಿಚಾರಣೆಯನ್ನು ಆಲಿಸಿ ಸಿಬಿಐ ತನಿಖೆಗೆ ಸೂಚನೆ ನೀಡಿತು.
ಪ್ರಕರಣದ ತನಿಖೆಯ ವರದಿಯನ್ನು ಆ. 3ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ವಿಶೇಷ ಅರಣ್ಯ ಪೀಠವು ಸಿಬಿಐಗೆ ಆದೇಶಿಸಿದೆ. ಇದಲ್ಲದೇ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಹಕರಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಪೀಠವು ಸೂಚಿಸಿದೆ.
ಇದೀಗ ಸಿಬಿಐ, ಬಿಎಸ್ವೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಸಿಬಿಐ ಆದೇಶದ ಪ್ರತಿಗಾಗಿ ಕಾಯುತ್ತಿದೆ.
ಬಂಧನದ ಭೀತಿ: ಸುಪ್ರೀಂ ಕೋರ್ಟ್ ನ ಈ ಆದೇಶದಿಂದಾಗಿ ಮತ್ತೆ ಬಿಎಸ್ವೈ ಕುಟುಂಬವು ಬಂಧನದ ಭೀತಿಗೆ ಒಳಗಾಗಿದೆ.