ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸಿ, ದೂರುದಾರರ ಪರ ವಕೀಲರ ವಾದ ಆಲಿಸಿದರು. ಸಿರಾಜಿನ್ ಬಾಷಾ ಪರ ವಾದ ಮಂಡಿಸಿದ ವಕೀಲ ನಿತಿನ್, `ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 202ರ ಪ್ರಕಾರ ನ್ಯಾಯಾಲಯ ಈ ದೂರಿನಲ್ಲಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಬಹುದು. ನೇರವಾಗಿ ಆರೋಪಿಗಳಿಗೆ ಸಮನ್ಸ್ ಕೂಡ ಜಾರಿ ಮಾಡಿ ವಿಚಾರಣೆ ಆರಂಭಿಸಬಹುದು~ ಎಂದು ನ್ಯಾಯಾಲಯಕ್ಕೆ ವಿವರಿಸಿದರು.