ಕಲಬುರ್ಗಿ: ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಪರಿಹರಿಸುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದರು.
‘ಕರ್ನಾಟಕದ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದರೆ ಮಹದಾಯಿ ವಿವಾದಕ್ಕೆ ಪರಿಹಾರ ದೊರೆಯುತ್ತಿತ್ತು. ಕೆಲವರ ನಡವಳಿಕೆಯಲ್ಲಿ ಸಮಸ್ಯೆ ಇದೆ. ಹೀಗಾಗಿ ಅದು ಸಾಧ್ಯವಾಗಲಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ಸಮಸ್ಯೆಗೆ ನಾವು ಖಂಡಿತವಾಗಿಯೂ ಪರಿಹಾರ
ಕಂಡು ಹಿಡಿದೇ ಹಿಡಿಯುತ್ತೇವೆ’ ಎಂದರು.