ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಸಂಘ ಪರಿವಾರದಲ್ಲಿ ಕಪ್ಪುಹಣ

Last Updated 13 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಬಿಜೆಪಿ ಮತ್ತು ಸಂಘ ಪರಿವಾರದವರು ಕಪ್ಪುಹಣದ ಧಣಿಗಳಾಗಿದ್ದು, ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ಯಾವುದೇ ನೈತಿಕ ಹಕ್ಕು ಅವರಿಗೆ ಇಲ್ಲ~ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್‌ಸೋಮವಾರ  ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಜೆಪಿ ಹಾಗೂ ಸಂಘ ಪರಿವಾರದ ಬಳಿಯೇ ದೊಡ್ಡ ಪ್ರಮಾಣದ ಕಪ್ಪುಹಣ ಇದೆ. ಈ ಸಂಸ್ಥೆಗಳು ಗುರುದಕ್ಷಿಣೆ ಹೆಸರಿನಲ್ಲಿ ದೇಣಿಗೆ ಪಡೆದು ಸಂಪಾದಿಸಿರುವ ಅಕ್ರಮ ಆಸ್ತಿಗಳ ವಿವರವನ್ನು ಬಹಿರಂಗಪಡಿಸಲಿ~ ಎಂದು ಸವಾಲು ಹಾಕಿದರು. ಸಂಸದ ಅನಂತಕುಮಾರ್ ಭ್ರಷ್ಟಾಚಾರದ ವಿರುದ್ಧ ಆಂದೋಲನ ನಡೆಸುವುದಾಗಿ ಹೇಳಿದ್ದಾರೆ.

ಆದರೆ `ಹುಡ್ಕೋ~ದಲ್ಲಿ ನಡೆದ ರೂ 13ಸಾವಿರ ಕೋಟಿಗಳ ಹಗರಣದಲ್ಲಿ ಅವರ ವಿರುದ್ಧ ಇರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಮೊದಲು ಅವರು ಆರೋಪಮುಕ್ತರಾಗಲಿ. ನಂತರ ಚಳವಳಿ ನಡೆಸುವ ಬಗ್ಗೆ ಯೋಚಿಸಲಿ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT