ಇದಕ್ಕೆ ಮೊದಲು ಯೋಗೇಶ್ವರ್ ಜೆಡಿಎಸ್ ನಾಯಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದರು. ಆದರೆ, ಅವರು ಬಯಸುವಂತೆ ಚನ್ನಪಟ್ಟಣ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಭರವಸೆ ನೀಡುವ ಸಾಧ್ಯತೆ ಇಲ್ಲ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಉತ್ತಮ ಸ್ಥಿತಿಯಲ್ಲಿದೆ. ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ.