<p><strong>ಬೆಂಗಳೂರು: </strong>ಇತ್ತೀಚಿನ ಅಕಾಲಿಕ ಮಳೆಯಿಂದ ಆಗಿರುವ ನಷ್ಟದ ಬಗ್ಗೆ ಅಧ್ಯಯನಕ್ಕಾಗಿ ಕೇಂದ್ರದ ಮೂರು ತಂಡಗಳು ಶನಿವಾರ ಮತ್ತು ಭಾನುವಾರ ರಾಜ್ಯದಲ್ಲಿ ಪ್ರವಾಸ ಮಾಡಲಿವೆ.<br /> <br /> ಕೃಷಿ ಇಲಾಖೆ ವ್ಯಾಪ್ತಿಯ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ವಸುಧಾ ಮಿಶ್ರಾ, ಯೋಜನಾ ಆಯೋಗದ ಉಪ ಸಲಹೆಗಾರ ಮಾನಸ್ ಚೌಧುರಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯಕ ಆಯುಕ್ತ ಪ್ರಸನ್ನ ವಿ.ಸಾಲಿಯಾನ ಈ ತಂಡಗಳ ನೇತೃತ್ವ ವಹಿಸಿದ್ದಾರೆ.<br /> <br /> ಇವು ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ.<br /> ಮಿಶ್ರಾ ಮತ್ತು ಚೌಧುರಿ ನೇತೃತ್ವದ ತಂಡಗಳು ಬೆಳಗಾವಿಯಲ್ಲಿ ಮೊದಲ ದಿನ ಜಂಟಿ ಪ್ರವಾಸ ಮಾಡಿ ನಷ್ಟದ ಬಗ್ಗೆ ಅಂದಾಜು ಮಾಡಲಿವೆ.<br /> <br /> ಮಿಶ್ರಾ ನತಂಡ ಶನಿವಾರ ಸಂಜೆ ವಿಜಾಪುರ ಮತ್ತು ಭಾನುವಾರ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ಚೌಧುರಿ ನೇತೃತ್ವದ ತಂಡ ಬೆಳಗಾವಿ ಬಳಿಕ ಬಾಗಲಕೋಟೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.<br /> <br /> ಪ್ರಸನ್ನ ನೇತೃತ್ವದ 3ನೇ ತಂಡ ಶನಿವಾರ ಬೆಳಿಗ್ಗೆ ಹೈದರಾಬಾದ್ ಮಾರ್ಗವಾಗಿ ರಾಜ್ಯ ಪ್ರವೇಶಿಸಲಿದೆ. ಮೊದಲ ದಿನ ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ಭಾನುವಾರ ಗುಲ್ಬರ್ಗದ ಕೆಲವು ತಾಲ್ಲೂಕು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ ಎಂದು ಗೊತ್ತಾಗಿದೆ.<br /> ಸೋಮವಾರ ನಗರಕ್ಕೆ ವಾಪಸಾಗುವ ಮೂರೂ ತಂಡಗಳು ಮುಖ್ಯಮಂತ್ರಿ ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಸಭೆ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಇತ್ತೀಚಿನ ಅಕಾಲಿಕ ಮಳೆಯಿಂದ ಆಗಿರುವ ನಷ್ಟದ ಬಗ್ಗೆ ಅಧ್ಯಯನಕ್ಕಾಗಿ ಕೇಂದ್ರದ ಮೂರು ತಂಡಗಳು ಶನಿವಾರ ಮತ್ತು ಭಾನುವಾರ ರಾಜ್ಯದಲ್ಲಿ ಪ್ರವಾಸ ಮಾಡಲಿವೆ.<br /> <br /> ಕೃಷಿ ಇಲಾಖೆ ವ್ಯಾಪ್ತಿಯ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ವಸುಧಾ ಮಿಶ್ರಾ, ಯೋಜನಾ ಆಯೋಗದ ಉಪ ಸಲಹೆಗಾರ ಮಾನಸ್ ಚೌಧುರಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯಕ ಆಯುಕ್ತ ಪ್ರಸನ್ನ ವಿ.ಸಾಲಿಯಾನ ಈ ತಂಡಗಳ ನೇತೃತ್ವ ವಹಿಸಿದ್ದಾರೆ.<br /> <br /> ಇವು ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ.<br /> ಮಿಶ್ರಾ ಮತ್ತು ಚೌಧುರಿ ನೇತೃತ್ವದ ತಂಡಗಳು ಬೆಳಗಾವಿಯಲ್ಲಿ ಮೊದಲ ದಿನ ಜಂಟಿ ಪ್ರವಾಸ ಮಾಡಿ ನಷ್ಟದ ಬಗ್ಗೆ ಅಂದಾಜು ಮಾಡಲಿವೆ.<br /> <br /> ಮಿಶ್ರಾ ನತಂಡ ಶನಿವಾರ ಸಂಜೆ ವಿಜಾಪುರ ಮತ್ತು ಭಾನುವಾರ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ಚೌಧುರಿ ನೇತೃತ್ವದ ತಂಡ ಬೆಳಗಾವಿ ಬಳಿಕ ಬಾಗಲಕೋಟೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.<br /> <br /> ಪ್ರಸನ್ನ ನೇತೃತ್ವದ 3ನೇ ತಂಡ ಶನಿವಾರ ಬೆಳಿಗ್ಗೆ ಹೈದರಾಬಾದ್ ಮಾರ್ಗವಾಗಿ ರಾಜ್ಯ ಪ್ರವೇಶಿಸಲಿದೆ. ಮೊದಲ ದಿನ ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ಭಾನುವಾರ ಗುಲ್ಬರ್ಗದ ಕೆಲವು ತಾಲ್ಲೂಕು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ ಎಂದು ಗೊತ್ತಾಗಿದೆ.<br /> ಸೋಮವಾರ ನಗರಕ್ಕೆ ವಾಪಸಾಗುವ ಮೂರೂ ತಂಡಗಳು ಮುಖ್ಯಮಂತ್ರಿ ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಸಭೆ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>