ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸಿಗೆ: ಕೋರ್ಟ್‌ ಸಮಯ ಬದಲಾವಣೆ

Last Updated 29 ಮಾರ್ಚ್ 2019, 19:14 IST
ಅಕ್ಷರ ಗಾತ್ರ

ಬೆಂಗಳೂರು: ಬೇಸಿಗೆಯಿಂದಾಗಿ ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಿವಿಲ್‌, ಕ್ರಿಮಿನಲ್‌, ಕೌಟುಂಬಿಕ ಮತ್ತು ಕಾರ್ಮಿಕ ನ್ಯಾಯಾಲಯಗಳ ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಈ ಜಿಲ್ಲೆಗಳ ಎಲ್ಲ ನ್ಯಾಯಾಲಯಗಳು ಏಪ್ರಿಲ್‌ 1ರಿಂದ ಮೇ 31ರವರೆಗೆ ಬೆಳಗ್ಗೆ 8ರಿಂದ 11 ಮತ್ತು 11.30ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯ ನಿರ್ವಹಿಸಲಿವೆ.

‘ಕಚೇರಿ ಅವಧಿಯನ್ನು ಬೆಳಗ್ಗೆ 7.30 ರಿಂದ 11 ಹಾಗೂ 11.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಿಗದಿ ಮಾಡಲಾಗಿದೆ’ ಎಂದು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ವಿ.ಶ್ರೀಶಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT